ಬ್ರೇಕಿಂಗ್ ನ್ಯೂಸ್
28-06-24 07:06 pm HK News Desk ಕರ್ನಾಟಕ
ಬೆಳಗಾವಿ, ಜೂ 28: ಹಣಕ್ಕೆ ಬೇಡಿಕೆಯಿಟ್ಟು ಹೆಸ್ಕಾಂ ಅಧಿಕಾರಿ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ ಆರೋಪದ ಮೇಲೆ ದೂರುದಾರೆ ಸೇರಿದಂತೆ 13 ಮಂದಿಗೆ ಆರೋಪಿಗಳಿಗೆ ಬೆಳಗಾವಿ ಜಿಲ್ಲಾ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ 86 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಬಿ.ವಿ.ಸಿಂಧು ಸುಳ್ಳು ಕೇಸ್ ದಾಖಲಿಸಿ ಜೈಲು ಸೇರಿರುವ ಮಹಿಳೆ. ಅಪರಾಧಿ ಸಿಂಧು ಅಂದಿನ ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರರಾದ ತುಕಾರಾಮ್ ಮಜ್ಜಿಗೆ ವಿರುದ್ಧ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದಳು. ಸುಳ್ಳು ಕೇಸ್ ಎಂದು ವಿಚಾರಣೆ ವೇಳೆ ಸಾಬೀತಾದ ಹಿನ್ನೆಲೆ ದೂರುದಾರೆ ಬಿ.ವಿ ಸಿಂಧು ಸೇರಿ 13 ಜನರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
2014ರ ನವೆಂಬರ್ 19ರಂದು ಬೆಳಗಾವಿ ಜಿಲ್ಲೆಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಆರೋಪ ಮಾಡಿ ಮಹಿಳೆಯೊಬ್ಬರು ಕೇಸ್ ದಾಖಲು ಮಾಡಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಮಾಳಮಾರುತಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಅತ್ಯಾಚಾರ, ಜೀವ ಬೆದರಿಕೆ ಹಾಕಿದ್ದು ಸುಳ್ಳು ಎಂದು ತನಿಖೆಯಲ್ಲಿ ಬಯಲಾಗಿತ್ತು. ವಿಚಾರಣೆ ವೇಳೆ ಪ್ರಕರಣದ ಇತರೆ ಆರೋಪಿಗಳಿಂದ ಪ್ರಭಾವಿತಳಾಗಿ ಸುಳ್ಳು ದೂರು ದಾಖಲಿಸಿದ್ದಾಗಿ ಸಿಂಧು ತಪ್ಪೊಪ್ಪಿಕೊಂಡಿದ್ದಳು.
2017ರಲ್ಲಿ ದೂರುದಾರೆ ಸಿಂಧು ಸೇರಿದಂತೆ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ತುಕಾರಾಮ್ ಮಜ್ಜಿಗೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನ ಸಾಕ್ಷಿದಾರರಿಂದ 81 ಸಾಕ್ಷಿಗಳನ್ನು ಪೊಲೀಸರು ಸಂಗ್ರಹಿಸಿದ್ದರು. ಏಳು ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ, ತಲಾ 86 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಮೂರ್ತಿ ಆದೇಶ ಹೊರಡಿಸಿದ್ದಾರೆ.
The principal district and sessions court of Belagavi on Thursday sentenced 13 people to imprisonment in a case of false rape accusations against their superior officer at the local Hescom office. The court sentenced them, including a woman - the main accused - to three years and six months of imprisonment and fined them Rs 86,000 each. The district and session court judge L Vijayalakshmi Devi pronounced the verdict on Thursday.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm