ಬ್ರೇಕಿಂಗ್ ನ್ಯೂಸ್
28-06-24 07:06 pm HK News Desk ಕರ್ನಾಟಕ
ಬೆಳಗಾವಿ, ಜೂ 28: ಹಣಕ್ಕೆ ಬೇಡಿಕೆಯಿಟ್ಟು ಹೆಸ್ಕಾಂ ಅಧಿಕಾರಿ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ ಆರೋಪದ ಮೇಲೆ ದೂರುದಾರೆ ಸೇರಿದಂತೆ 13 ಮಂದಿಗೆ ಆರೋಪಿಗಳಿಗೆ ಬೆಳಗಾವಿ ಜಿಲ್ಲಾ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ 86 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಬಿ.ವಿ.ಸಿಂಧು ಸುಳ್ಳು ಕೇಸ್ ದಾಖಲಿಸಿ ಜೈಲು ಸೇರಿರುವ ಮಹಿಳೆ. ಅಪರಾಧಿ ಸಿಂಧು ಅಂದಿನ ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರರಾದ ತುಕಾರಾಮ್ ಮಜ್ಜಿಗೆ ವಿರುದ್ಧ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದಳು. ಸುಳ್ಳು ಕೇಸ್ ಎಂದು ವಿಚಾರಣೆ ವೇಳೆ ಸಾಬೀತಾದ ಹಿನ್ನೆಲೆ ದೂರುದಾರೆ ಬಿ.ವಿ ಸಿಂಧು ಸೇರಿ 13 ಜನರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
2014ರ ನವೆಂಬರ್ 19ರಂದು ಬೆಳಗಾವಿ ಜಿಲ್ಲೆಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಆರೋಪ ಮಾಡಿ ಮಹಿಳೆಯೊಬ್ಬರು ಕೇಸ್ ದಾಖಲು ಮಾಡಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಮಾಳಮಾರುತಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಅತ್ಯಾಚಾರ, ಜೀವ ಬೆದರಿಕೆ ಹಾಕಿದ್ದು ಸುಳ್ಳು ಎಂದು ತನಿಖೆಯಲ್ಲಿ ಬಯಲಾಗಿತ್ತು. ವಿಚಾರಣೆ ವೇಳೆ ಪ್ರಕರಣದ ಇತರೆ ಆರೋಪಿಗಳಿಂದ ಪ್ರಭಾವಿತಳಾಗಿ ಸುಳ್ಳು ದೂರು ದಾಖಲಿಸಿದ್ದಾಗಿ ಸಿಂಧು ತಪ್ಪೊಪ್ಪಿಕೊಂಡಿದ್ದಳು.
2017ರಲ್ಲಿ ದೂರುದಾರೆ ಸಿಂಧು ಸೇರಿದಂತೆ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ತುಕಾರಾಮ್ ಮಜ್ಜಿಗೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನ ಸಾಕ್ಷಿದಾರರಿಂದ 81 ಸಾಕ್ಷಿಗಳನ್ನು ಪೊಲೀಸರು ಸಂಗ್ರಹಿಸಿದ್ದರು. ಏಳು ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ, ತಲಾ 86 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಮೂರ್ತಿ ಆದೇಶ ಹೊರಡಿಸಿದ್ದಾರೆ.
The principal district and sessions court of Belagavi on Thursday sentenced 13 people to imprisonment in a case of false rape accusations against their superior officer at the local Hescom office. The court sentenced them, including a woman - the main accused - to three years and six months of imprisonment and fined them Rs 86,000 each. The district and session court judge L Vijayalakshmi Devi pronounced the verdict on Thursday.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm