ಬ್ರೇಕಿಂಗ್ ನ್ಯೂಸ್
30-06-24 09:56 pm HK News Desk ಕರ್ನಾಟಕ
ಹಾವೇರಿ, ಜೂನ್.30: ರಾಜ್ಯದಲ್ಲಿ ಈಡಿಗ ಸಮುದಾಯ ತನ್ನದೇ ಆದ ರಾಜಕೀಯ ಪ್ರಾಬಲ್ಯ ಹೊಂದಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುವುದಾದರೆ ಹಿಂದುಳಿದ ವರ್ಗದ ಬಿ.ಕೆ. ಹರಿಪ್ರಸಾದ್ ಅವರನ್ನೇ ಸಿಎಂ ಅಥವಾ ಡಿಸಿಎಂ ಮಾಡುವಂತೆ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.
ಯಾದಗಿರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮೀಜಿ, ಹರಿಪ್ರಸಾದ ಅವರ ಹಿಂದೆ ಇಡೀ ಹಿಂದುಳಿದ ವರ್ಗದ ಸಮಾಜ ಇದೆ. ಹರಿಪ್ರಸಾದ್ ಅವರ ಪರವಾಗಿ ಗಟ್ಟಿ ಧ್ವನಿಯಲ್ಲಿ ಹೇಳುತ್ತಿದ್ದೇನೆ. ಸಿಎಂ, ಡಿಸಿಎಂ ಸ್ಥಾನ ಬದಲಾದರೆ ಬಿಕೆ ಹರಿಪ್ರಸಾದ್ ಅವರಿಗೆ ಆ ಸ್ಥಾನ ನೀಡಬೇಕು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಾದ್ರೂ ಹರಿಪ್ರಸಾದ್ ಅವರಿಗೆ ನೀಡಬೇಕು. ಈ ಹುದ್ದೆಗಳನ್ನು ತುಂಬಲು ಹರಿಪ್ರಸಾದ್ ಸಮರ್ಥರಿದ್ದಾರೆ ಎಂದು ಹೇಳಿದರು.
)
ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ 49 ವರ್ಷಗಳ ಕಾಲ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದಿದ್ದಾರೆ. ಇಂದಿರಾ ಗಾಂಧಿಯಿಂದ ಹಿಡಿದು ಪ್ರಸ್ತುತ ಪ್ರಿಯಾಂಕಾ ಗಾಂಧಿ ವರೆಗೆ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಈಡಿಗ ಸಮಾಜಕ್ಕೆ ಒಂದೇ ಒಂದು ಸಚಿವ ಸ್ಥಾನ ನೀಡಿದ್ದಾರೆ. ಆದರೆ, ಬಿಜೆಪಿ ಸರ್ಕಾರವಿದ್ದಾಗ ಇಬ್ಬರಿಗೆ ಸಚಿವ ಸ್ಥಾನ, ಮೂವರಿಗೆ ನಿಗಮ ಮಂಡಳಿ ಸ್ಥಾನ ನೀಡಿದ್ದರು ಎಂದರು.

ಕಾಂಗ್ರೆಸ್ ಹೈಕಮಾಂಡ್ ಅಧಿಕಾರ ನೀಡುವಾಗ ಏನು ಹೊಂದಾಣಿಕೆ ಮಾಡಿಕೊಂಡಿತ್ತೋ ಅದರಂತೆ ಬದಲಾವಣೆ ಮಾಡುವುದಾದರೆ ಈಡಿಗ ಸಮಾಜದ ನಾಯಕ ಬಿ.ಕೆ.ಹರಿಪ್ರಸಾದ್ಗೆ ಸಿಎಂ ಸ್ಥಾನ ನೀಡಬೇಕು. ಕೊನೆ ಪಕ್ಷ ಡಿಸಿಎಂ ಹುದ್ದೆಯನ್ನಾದರೂ ನೀಡಲಿ. ರಾಜ್ಯ ಸರ್ಕಾರ ರಚನೆಯಾಗುವಾಗ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹರಿಪ್ರಸಾದ್ ಅವರನ್ನು ಸಚಿವರಾಗಿ ನೇಮಕ ಮಾಡುವಂತೆ ಹೇಳಿದ್ದರು. ಆದರೆ, ಅವರ ಮಾತನ್ನು ಗಾಳಿಗೆ ತೂರಿ ಸಚಿವ ಸ್ಥಾನವನ್ನೂ ನೀಡದೆ ಅಪಮಾನ ಮಾಡಲಾಗಿದೆ ಎಂದು ದೂರಿದರು.
The Yidiga community has its own political hegemony in the state. Pranavanandshree demanded to declare BK Hariprasad as CM or DCM if there is a change in the position of CM.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm