ಬ್ರೇಕಿಂಗ್ ನ್ಯೂಸ್
02-07-24 02:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.02: ನಟ ದರ್ಶನ್ ಮೇಲಿನ ಮಿತಿಮೀರಿದ ಅಭಿಮಾನದ ಹುಚ್ಚಿನಿಂದಾಗಿ ಅಭಿಮಾನಿಯೊಬ್ಬ ತಾನು ಹೆತ್ತ ಮಗುವನ್ನೇ ಕೈದಿ ಮಾಡಿ ಹಾಕಿದ್ದಾನೆ!
ಹೌದು, ಇದು ನಟನ ಮೇಲಿನ ಅಂಧಾಭಿಮಾನದ ಎಫೆಕ್ಟ್. ಮಗುವಿಗೆ ಪರಪ್ಪನ ಅಗ್ರಹಾರದ ಕೈದಿಯಂತೆ ಫೋಟೋ ಶೂಟ್ ಮಾಡಿಸಿದ್ದಾನೆ ಈ ಪುಣ್ಯಾತ್ಮ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ನ ಅಭಿಮಾನಿಗಳು ದಿನಕ್ಕೊಂದು ಅವತಾರ ತೋರುತ್ತಿದ್ದಾರೆ. ಇದೀಗ ಹೊಸದು. ಒಂದು ವರ್ಷದ ಮಗುವಿಗೆ ಜೈಲು ಕೈದಿಯ ರೀತಿ ಬಿಳಿ ಬಟ್ಟೆ ಹಾಕಿಸಿ ಈತ ಫೋಟೋ ಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಮಗುವಿಗೆ ದರ್ಶನ್ಗೆ ಕೊಡಲಾದ ಕೈದಿ ನಂಬರ್ ನೀಡಿದ್ದಾನೆ. ಕೈ ಕೋಳದ ಮಾದರಿ, ಕೈದಿಗಳ ರೀತಿ ಬಿಳಿ ಬಟ್ಟೆ ಹಾಕಿಸಿದ್ದಾನೆ.

ನಟನ ಮೇಲಿನ ಹುಚ್ಚು ಅಭಿಮಾನಕ್ಕೆ ಅಭಿಮಾನಿಗಳಿಂದ ನಿತ್ಯ ಒಂದೊಂದು ಹೊಸ ಟ್ರೆಂಡ್ ಸೃಷ್ಟಿಯಾಗುತ್ತಿದೆ. ದರ್ಶನ್ಗೆ ನೀಡಿರುವ ಕೈದಿ ನಂಬರ್ ಧರಿಸಿಕೊಂಡು ಒಬ್ಬಾತ ಫೋಟೋ ಶೂಟ್ ಮಾಡಿಸಿಕೊಂಡಿದ್ದ. ಇದೀಗ ಮಗುವಿಗೆ ಹೀಗೆ ಫೋಟೋ ಶೂಟ್ ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಾನಾ ಥರದ ಅಭಿಪ್ರಾಯಗಳು ವ್ಯಕ್ತವಾಗಿವೆ.
ʼಹಿಂದೆಲ್ಲ ಮಕ್ಕಳಿಗೆ ಕೃಷ್ಣನ ವೇಷ, ಸ್ವಾಮಿ ವಿವೇಕಾನಂದರ ವೇಷ, ಅಂಬೇಡ್ಕರ್ ಅವರಂತಹ ಗಣ್ಯ ವ್ಯಕ್ತಿಗಳ ರೀತಿಯ ಫೋಟೋ ಶೂಟ್ ಟ್ರೆಂಡ್ ಆಗಿತ್ತು. ಆದರೆ ಈಗ ಬೆಳೆಯುವ ಮಗುವಿಗೆ ಕೈದಿ ಫೋಟೋ ಶೂಟ್ ಮಾಡಿಸೋದೆ ಟ್ರೆಂಡ್ ಆಗಿದೆʼ ಎಂದು ಒಬ್ಬರು ಹೇಳಿದ್ದಾರೆ. “ಈಗಿಂದಾನೇ ಮಗನನ್ನು ಜೈಲಿಗೆ ಕಳಿಸೋ ಪ್ಲಾನ್ ಇದು. ನಟ ಒಳ್ಳೇದು ಮಾಡಿದಾಗ ಅಭಿಮಾನಿಗಳು ಸಂಭ್ರಮಿಸಿ ತಪ್ಪೇನೂ ಇಲ್ಲ. ಆದರೆ ಕೆಟ್ಟದು ಮಾಡಿದಾಗ ಖಂಡಿಸಿʼ ಎಂದು ಮತ್ತೊಬ್ಬರು ಬರೆದಿದ್ದಾರೆ.
Actor Darshan Fan makes baby wear prison costume, photos go viral with cell no 6106 on the dress. Comments on Internet has slammed darshan fan for such photo shoot.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm