ಬ್ರೇಕಿಂಗ್ ನ್ಯೂಸ್
06-12-20 10:19 pm Headline Karnataka News Network ಕರ್ನಾಟಕ
ವಿಜಯಪುರ, ಡಿ.6: ಒಂದೆಡೆ ಕುರುಬ ಸಮುದಾಯಕ್ಕೆ ಎಸ್ಸಿ ಮೀಸಲು ಕರುಣಿಸಲು ದಾಳ ಉರುಳಿಸುತ್ತಿರುವ ರಾಜ್ಯ ಸರಕಾರಕ್ಕೆ ಪಂಚಮ ಸಾಲಿ ಸಂಕಷ್ಟ ಎದುರಾಗಿದೆ.
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ಹೋರಾಟಕ್ಕೆ ನಿರ್ಧರಿಸಲಾಗಿದೆ. ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಮುದಾಯ ಮುಖಂಡರು ಉದ್ದೇಶಿಸಿದ್ದು ವಿಜಯಪುರದಿಂದ ಡಿ.23 ರಿಂದ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ.
ಈ ಬಗ್ಗೆ ವಿಜಯಪುರದಲ್ಲಿ ಪಂಚಮಸಾಲಿ ಸಮುದಾಯದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಟಿ ನಡೆಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲ ಸಂಗಮ ಪೀಠದಿಂದ ಬೆಂಗಳೂರು ವಿಧಾನಸೌಧದ ವರೆಗೆ ಪಂಚಲಕ್ಷ ಹೆಜ್ಜೆಗಳೊಂದಿಗೆ ಬೃಹತ್ ಪಾದಯಾತ್ರೆ ನಡೆಸಲಿದ್ದಾರೆ.
ಮೀಸಲು ವಿಷಯ ಮುಂದಿಟ್ಟು ಕಳೆದ ಅಕ್ಟೋಬರ್ 28ರಂದು ಬೆಳಗಾವಿ ಸುವರ್ಣ ಸೌಧದ ಎದುರು ಬಸವ ಮೃತ್ಯುಂಜಯ ಸ್ವಾಮೀಜಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಈ ವೇಳೆ ಸ್ವಾಮೀಜಿಗೆ ಕರೆ ಮಾಡಿದ್ದ ಸಿಎಂ ಯಡಿಯೂರಪ್ಪ, ಬೇಡಿಕೆ ಇಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಬೇಡಿಕೆ ಈಡೇರದ ಕಾರಣ ಪಂಚಮಸಾಲಿ ಶ್ರೀಗಳು ಪಾದಯಾತ್ರೆಗೆ ಮುಂದಾಗಿದ್ದಾರೆ.
ಸಿಎಂ ಸ್ಥಾನ ಉತ್ತರ ಕರ್ನಾಟಕಕ್ಕೆ ನೀಡಿ...
ಇದೇ ವೇಳೆ, ಸಿಎಂ ಬದಲಾವಣೆ ಮಾಡೋದಾದ್ರೆ ಪಂಚಮಸಾಲಿ ಸಮುದಾಯದ ಮುಖಂಡರಿಗೆ ಪ್ರಾತಿನಿಧ್ಯ ನೀಡಬೇಕು. ಸಿಎಂ ಬದಲಾವಣೆ ಮಾಡುವುದು ಕೇಂದ್ರಕ್ಕೆ ಬಿಟ್ಟಿದ್ದು. ಏನೇ ಮಾಡಲಿ, ಯಡಿಯೂರಪ್ಪ ಅವರನ್ನು ಬದಲಿಸುವುದಿದ್ದರೆ ಸಿಎಂ ಸ್ಥಾನವನ್ನು ಉತ್ತರ ಕರ್ನಾಟಕ ಭಾಗಕ್ಕೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 06:57 pm
Mangalore Correspondent
Mangalore, Suhas Shetty Murder, Anti Communia...
03-05-25 02:58 pm
Mangalore Suhas Shetty Murder, Instagram, Pol...
02-05-25 10:47 pm
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm