ಬ್ರೇಕಿಂಗ್ ನ್ಯೂಸ್
03-07-24 08:07 pm HK News Desk ಕರ್ನಾಟಕ
ಕೋಲಾರ, ಜುಲೈ 04: ನಗರ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು (17) ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.
ಮುಳಬಾಗಿಲಿನ ಅನಿಲ್ ಕುಮಾರ್ (21) ಬಂಧಿತ ಯುವಕ.
ಬಾಲಕಿಯು ಶ್ರೀನಿವಾಸಪುರ ತಾಲ್ಲೂಕಿನಿಂದ ಕಾಲೇಜಿಗೆ ಬರುತ್ತಿದ್ದಳು. ಸೋಮವಾರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಆಕೆ ಶೌಚಾಲಯಕ್ಕೆ ಹೋಗಿದ್ದಾಳೆ. ಈ ಸಮಯದಲ್ಲಿ ಮಗು ಜನನವಾಗಿದೆ. ಮಗುವಿನ ಅಳು ಸದ್ದು ಕೇಳಿ ಕಕ್ಕಾಬಿಕ್ಕಿಯಾದ ಕಾಲೇಜಿನ ಉಪನ್ಯಾಸಕಿಯರು, ಸಿಬ್ಬಂದಿ ಸ್ಥಳಕ್ಕೆ ಓಡಿ ಹೋಗಿದ್ದಾರೆ. ತಕ್ಷಣವೇ ಸಮೀಪದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ತಾಯಿ ಹಾಗೂ ಮಗುವನ್ನು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಉಪನ್ಯಾಸಕರು ಬಾಲಕಿಯ ಪೋಷಕರಿಗೆ ವಿಚಾರ ಮುಟ್ಟಿಸಿದ್ದು, ಅವರೂ ಆಸ್ಪತ್ರೆಗೆ ಬಂದಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
2023ರಲ್ಲೂ ಇಂಥದ್ದೇ ಘಟನೆ:
ಕೋಲಾರ ನಗರದ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ 2023ರಲ್ಲಿ ಇಂಥದ್ದೇ ಘಟನೆ ಸಂಭವಿಸಿತ್ತು.
ಆಗ ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳಿಗೆ ಶೌಚಾಲಯದಲ್ಲಿ ಮಗು ಜನಿಸಿತ್ತು. ಬಾಲಕಿಯ ಆ ಮಗುವಿನ ಕತ್ತು ಹಿಸುಕಿ ಸಾಯಿಸಿ ಶೌಚಾಲಯದೊಳಗೆ ತುರುಕಿದ್ದಳು. ನಂತರ ಹೊರಗೆ ಬಂದು ರಕ್ತಸ್ರಾವವಾಗಿದ್ದು, ತಾಯಿಯನ್ನು ಕರೆಸುವಂತೆ ಉಪನ್ಯಾಸಕರಿಗೆ ಹೇಳಿದ್ದಳು. ನಂತರ ಸ್ವಚ್ಛತಾ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸಲು ಹೋದಾಗ ಮಗುವಿರುವುದು ಪತ್ತೆಯಾಗಿತ್ತು. ವಿಚಾರಣೆ ನಡೆಸಿದಾಗ ಬಾಲಕಿ ತಾನೇ ಮಗುವನ್ನು ಸಾಯಿಸಿರುವುದಾಗಿ ಒಪ್ಪಿಕೊಂಡಿದ್ದಳು. ಬಾಲಕಿಯು ಫೇಸ್ಬುಕ್ನಲ್ಲಿ ಯುವಕನನ್ನು ಪರಿಚಯಿಸಿಕೊಂಡು ಪ್ರೀತಿಸುತ್ತಿದ್ದಳು.
A girl (17) who was studying first PUC in a private college on the outskirts of the city gave birth to a baby girl in the toilet of the same college. A POCSO case has been registered in this connection and the youth has been arrested.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 09:42 am
Richard, Headline Karnataka
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm