ಬ್ರೇಕಿಂಗ್ ನ್ಯೂಸ್
03-07-24 09:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 3: ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗ್ಯು ಜ್ವರ ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯು ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಮನಬಂದಂತೆ ಡೆಂಗ್ಯು ಪರೀಕ್ಷೆಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಗಿ ಟೆಸ್ಟಿಂಗ್ ಗೆ ದರ ನಿಗದಿಪಡಿಸಿದೆ. ಎರಡು ರೀತಿಯ ಟೆಸ್ಟಿಂಗ್ ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್ ಗಳಿಗೆ ತಲಾ 300 ರೂ. ಗಳನ್ನ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬರೋಟರಿಗಳು ಡೆಂಗಿ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ದರ ವಿಧಿಸುವಂತಿಲ್ಲ.
ಡೆಂಗ್ಯು ನಿಯಂತ್ರಣ ಮುಂಜಾಗೃತ ಕ್ರಮಗಳ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದಾರೆ. ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒ, ನಗರ ಸ್ಥಳೀಯ ಸಂಸ್ಥೆಗಳು, ಡೆಂಗಿ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿದ್ದಾರೆ.
The Health Department has issued an important order to prevent dengue fever, which is common during the rainy season, from becoming a burden on the masses. Free treatment for dengue fever is available in government hospitals.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 09:32 pm
HK News Desk
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm