ಬ್ರೇಕಿಂಗ್ ನ್ಯೂಸ್
10-07-24 08:14 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಅವರನ್ನು ಇಡಿ ಅಧಿಕಾರಗಳು ವಿಚಾರಣೆ ನಡೆಸಿದ್ದಾರೆ.
ನಾಗೇಂದ್ರ ಅವರ ಬಳ್ಳಾರಿಯ ನೆಹರೂ ಕಾಲೋನಿಯಲ್ಲಿರುವ ನಿವಾಸ ಹಾಗೂ ಬೆಂಗಳೂರಿನ ಡಾಲರ್ಸ್ ಕಾಲನಿಯ ನಿವಾಸಕ್ಕೆ ಇ.ಡಿ. ಅಧಿಕಾರಿಗಳು ಬುಧವಾರ ಬೆಳಗ್ಗಿನಿಂದಲೇ ದಾಳಿ ನಡೆಸಿದ್ದು ಅಲ್ಲಿರುವ ಸಿಬಂದಿ, ಆಪ್ತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಬೆಂಗಳೂರಿನ ಮನೆಯಲ್ಲಿದ್ದ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.


ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೆ ಸೇರಿದ ಬೆಂಗಳೂರಿನ ಯಲಹಂಕದಲ್ಲಿರುವ ನಿವಾಸ ಹಾಗೂ ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ನಿವಾಸದ ಮೇಲೂ ಏಕಕಾಲದಲ್ಲಿ ಇ.ಡಿ. ಅಧಿಕಾರಿಗಳ ದಾಳಿ ನಡೆದಿದೆ. ವಾಲ್ಮೀಕಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಂದೆ ಮಂಗಳವಾರವಷ್ಟೇ ಹಾಜರಾಗಿದ್ದ ದದ್ದಲ್, ವಿಚಾರಣೆ ಎದುರಿಸಿ ಹೋಗಿದ್ದರು. ಅದಾದ ಮರುದಿನವೇ ಅವರ ನಿವಾಸದ ಮೇಲೆ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳವಾರ ನಡೆದಿದ್ದ ಎಸ್ ಐಟಿ ವಿಚಾರಣೆಗೆ ಬಿ. ನಾಗೇಂದ್ರ ಕೂಡ ಹಾಜರಾಗಿದ್ದರು. ಆ ವೇಳೆ, ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ, ಬಸನಗೌಡ ದದ್ದಲ್ ಗೆ ಮಂಗಳವಾರ ಪ್ರಶ್ನೆಗಳ ಸುರಿಮಳೆಗೈದಿದ್ದರು. ಸತತ 8 ಗಂಟೆ ವಿಚಾರಣೆ ನಡೆಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಪ್ತ ಸಹಾಯಕನ ಆಡಿಯೋ ಆಧಾರದ ಮೇಲೆ ಬಿ.ನಾಗೇಂದ್ರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಬುಧವಾರ ಬೆಳಗ್ಗಿನಿಂದ ಸಂಜೆಯ ವರೆಗೂ ಸುದೀರ್ಘ ಸಮಯ ವಿಚಾರಣೆ ನಡೆಸಿದ್ದು ಸಾಕ್ಷ್ಯ ಸಿಕ್ಕಲ್ಲಿ ಅರೆಸ್ಟ್ ಆಗುವ ಸಾಧ್ಯತೆಯಿದೆ.
ವಾಲ್ಮೀಕಿ ನಿಗಮದಲ್ಲಿ 194 ಕೋಟಿ ರೂ. ಮೊತ್ತವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿ ಡ್ರಾ ಮಾಡಲಾಗಿದೆ. ದೊಡ್ಡ ಮೊತ್ತದ ಹಣ ವರ್ಗಾವಣೆ ಆಗಿರುವುದರಿಂದ ಇಡಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ.
Enforcement Directorate (ED) officials on Wednesday morning raided the houses of former Scheduled Tribe Welfare minister B Nagendra and Congress MLA Basanagouda Daddal. The raid came a day after both politicians appeared before the Special Investigation Team (SIT) probing the alleged multi-crore scam at the Karnataka Maharshi Valmiki Scheduled Tribes Development Corporation for questioning. The ED officials visited.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm