ಬ್ರೇಕಿಂಗ್ ನ್ಯೂಸ್
12-07-24 10:30 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 11: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಶಾಂತಿನಗರದ ಇ.ಡಿ ಕಚೇರಿಗೆ ಕರೆದುಕೊಂಡು ಬರುತ್ತಿದ್ದಾರೆ. ಬೆಂಗಳೂರಿನ ಅವರ ಮನೆಯಿಂದ ಇಡಿ ವಶಕ್ಕೆ ಪಡೆದು ಕರೆದುಕೊಂಡು ಬಂದಿದ್ದಾರೆ.
ಕಳೆದ ಎರಡು ದಿನದಿಂದ ಶೋಧ ಕಾರ್ಯ ನಡೆಸಿದ ಇ.ಡಿ ಅಧಿಕಾರಿಗಳು ಈಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. 94 ಕೋಟಿ ರುಪಾಯಿ ನಿಗಮದ ಹಣವನ್ನು ಅಕ್ರಮವಾಗಿ ಬಳಸಿಕೊಳ್ಳಲಾಗಿತ್ತು. ಹೀಗಾಗಿ ಇಡಿ ಏಕಕಾಲದಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿತ್ತು. ಬಿ ನಾಗೇಂದ್ರ ಅವರ ಮೇಲೆ ಆಪ್ತನೋರ್ವನಿಂದ 25 ಲಕ್ಷ ಲಂಚ ಸ್ವೀಕರಿಸಿರುವ ಆರೋಪ ಇದೆ.
94 ಕೋಟಿ ಹಣವನ್ನು ವಾಲ್ಮೀಕಿ ನಿಗಮದ ಖಾತೆಯಿಂದ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆಗಿದೆ ಎಂಬ ಆರೋಪ ಇದೆ. ಸಚಿವ ಸೂಚನೆಯ ಮೇರೆಗೆ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಇದಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ನೀಡಿತ್ತು.
ಎಸ್ಐಟಿ ತನಿಖೆ ನಡೆಯುತ್ತಿದ್ದ ಸಂದರ್ಭದಲ್ಲೇ ಇ.ಡಿ ದಾಳಿ ನಡೆಸಿತ್ತು. ಬಳ್ಳಾರಿ ಹಾಗೂ ಬೆಂಗಳೂರಿನ ನಿವಾಸ ಮತ್ತು ಕಚೇರಿಗಳ ಮೇಲೆ ಇ.ಡಿ ದಾಳಿ ನಡೆಸಿತ್ತು. ಹಲವಾರು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು.
ಇದೀಗ ಹೆಚ್ಚಿನ ವಿಚಾರಣೆಗಾಗಿ ನಾಗೇಂದ್ರ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ಅವರನ್ನು ಕರೆತರಲಾಗಿದೆ
ಇನ್ನು 'ನನಗೇನೂ ಗೊತ್ತಿಲ್ಲ ...ನಾನು ಯಾರಿಗೂ ಏನೂ ಕೊಟ್ಟಿಲ್ಲ' ಎಂದು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆಯುವ ವೇಳೆ ಮಾಧ್ಯಮಗಳಿಗೆ ಮಾಜಿ ಸಚಿವ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ
ಏನಿದು ಪ್ರಕರಣ ?
ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಮೇಲೆ ನಿಗಮದಲ್ಲಿ 187 ಕೋಟಿ ಹಗರಣ ಆಗಿರೋದು ಬಯಲಾಗಿತ್ತು. ಐಟಿ ಕಂಪನಿಗಳು ಮತ್ತು ಹೈದರಾಬಾದ್ ಮೂಲದ ಸಹಕಾರಿ ಬ್ಯಾಂಕ್ನ ವಿವಿಧ ಖಾತೆಗಳಿಗೆ 88.62 ಕೋಟಿ ಅಕ್ರಮವಾಗಿ ಜಮಾ ಮಾಡಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೂರಿನ ಮೇಲೆ ಸಿಬಿಐ ಮತ್ತು ಇಡಿ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ.
The Enforcement Directorate on Friday took former Minister B Nagendra into custody, as part of a money-laundering probe linked to the alleged irregularities in the Karnataka Maharshi Valmiki Scheduled Tribes Development Corporation Limited, official.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm