ಬ್ರೇಕಿಂಗ್ ನ್ಯೂಸ್
12-07-24 10:30 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 11: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಶಾಂತಿನಗರದ ಇ.ಡಿ ಕಚೇರಿಗೆ ಕರೆದುಕೊಂಡು ಬರುತ್ತಿದ್ದಾರೆ. ಬೆಂಗಳೂರಿನ ಅವರ ಮನೆಯಿಂದ ಇಡಿ ವಶಕ್ಕೆ ಪಡೆದು ಕರೆದುಕೊಂಡು ಬಂದಿದ್ದಾರೆ.
ಕಳೆದ ಎರಡು ದಿನದಿಂದ ಶೋಧ ಕಾರ್ಯ ನಡೆಸಿದ ಇ.ಡಿ ಅಧಿಕಾರಿಗಳು ಈಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. 94 ಕೋಟಿ ರುಪಾಯಿ ನಿಗಮದ ಹಣವನ್ನು ಅಕ್ರಮವಾಗಿ ಬಳಸಿಕೊಳ್ಳಲಾಗಿತ್ತು. ಹೀಗಾಗಿ ಇಡಿ ಏಕಕಾಲದಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿತ್ತು. ಬಿ ನಾಗೇಂದ್ರ ಅವರ ಮೇಲೆ ಆಪ್ತನೋರ್ವನಿಂದ 25 ಲಕ್ಷ ಲಂಚ ಸ್ವೀಕರಿಸಿರುವ ಆರೋಪ ಇದೆ.
94 ಕೋಟಿ ಹಣವನ್ನು ವಾಲ್ಮೀಕಿ ನಿಗಮದ ಖಾತೆಯಿಂದ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆಗಿದೆ ಎಂಬ ಆರೋಪ ಇದೆ. ಸಚಿವ ಸೂಚನೆಯ ಮೇರೆಗೆ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಇದಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ನೀಡಿತ್ತು.
ಎಸ್ಐಟಿ ತನಿಖೆ ನಡೆಯುತ್ತಿದ್ದ ಸಂದರ್ಭದಲ್ಲೇ ಇ.ಡಿ ದಾಳಿ ನಡೆಸಿತ್ತು. ಬಳ್ಳಾರಿ ಹಾಗೂ ಬೆಂಗಳೂರಿನ ನಿವಾಸ ಮತ್ತು ಕಚೇರಿಗಳ ಮೇಲೆ ಇ.ಡಿ ದಾಳಿ ನಡೆಸಿತ್ತು. ಹಲವಾರು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು.
ಇದೀಗ ಹೆಚ್ಚಿನ ವಿಚಾರಣೆಗಾಗಿ ನಾಗೇಂದ್ರ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ಅವರನ್ನು ಕರೆತರಲಾಗಿದೆ
ಇನ್ನು 'ನನಗೇನೂ ಗೊತ್ತಿಲ್ಲ ...ನಾನು ಯಾರಿಗೂ ಏನೂ ಕೊಟ್ಟಿಲ್ಲ' ಎಂದು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆಯುವ ವೇಳೆ ಮಾಧ್ಯಮಗಳಿಗೆ ಮಾಜಿ ಸಚಿವ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ
ಏನಿದು ಪ್ರಕರಣ ?
ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಮೇಲೆ ನಿಗಮದಲ್ಲಿ 187 ಕೋಟಿ ಹಗರಣ ಆಗಿರೋದು ಬಯಲಾಗಿತ್ತು. ಐಟಿ ಕಂಪನಿಗಳು ಮತ್ತು ಹೈದರಾಬಾದ್ ಮೂಲದ ಸಹಕಾರಿ ಬ್ಯಾಂಕ್ನ ವಿವಿಧ ಖಾತೆಗಳಿಗೆ 88.62 ಕೋಟಿ ಅಕ್ರಮವಾಗಿ ಜಮಾ ಮಾಡಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೂರಿನ ಮೇಲೆ ಸಿಬಿಐ ಮತ್ತು ಇಡಿ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ.
The Enforcement Directorate on Friday took former Minister B Nagendra into custody, as part of a money-laundering probe linked to the alleged irregularities in the Karnataka Maharshi Valmiki Scheduled Tribes Development Corporation Limited, official.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm