ಬ್ರೇಕಿಂಗ್ ನ್ಯೂಸ್
12-07-24 10:30 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 11: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಶಾಂತಿನಗರದ ಇ.ಡಿ ಕಚೇರಿಗೆ ಕರೆದುಕೊಂಡು ಬರುತ್ತಿದ್ದಾರೆ. ಬೆಂಗಳೂರಿನ ಅವರ ಮನೆಯಿಂದ ಇಡಿ ವಶಕ್ಕೆ ಪಡೆದು ಕರೆದುಕೊಂಡು ಬಂದಿದ್ದಾರೆ.
ಕಳೆದ ಎರಡು ದಿನದಿಂದ ಶೋಧ ಕಾರ್ಯ ನಡೆಸಿದ ಇ.ಡಿ ಅಧಿಕಾರಿಗಳು ಈಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. 94 ಕೋಟಿ ರುಪಾಯಿ ನಿಗಮದ ಹಣವನ್ನು ಅಕ್ರಮವಾಗಿ ಬಳಸಿಕೊಳ್ಳಲಾಗಿತ್ತು. ಹೀಗಾಗಿ ಇಡಿ ಏಕಕಾಲದಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿತ್ತು. ಬಿ ನಾಗೇಂದ್ರ ಅವರ ಮೇಲೆ ಆಪ್ತನೋರ್ವನಿಂದ 25 ಲಕ್ಷ ಲಂಚ ಸ್ವೀಕರಿಸಿರುವ ಆರೋಪ ಇದೆ.
94 ಕೋಟಿ ಹಣವನ್ನು ವಾಲ್ಮೀಕಿ ನಿಗಮದ ಖಾತೆಯಿಂದ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆಗಿದೆ ಎಂಬ ಆರೋಪ ಇದೆ. ಸಚಿವ ಸೂಚನೆಯ ಮೇರೆಗೆ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಇದಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ನೀಡಿತ್ತು.
ಎಸ್ಐಟಿ ತನಿಖೆ ನಡೆಯುತ್ತಿದ್ದ ಸಂದರ್ಭದಲ್ಲೇ ಇ.ಡಿ ದಾಳಿ ನಡೆಸಿತ್ತು. ಬಳ್ಳಾರಿ ಹಾಗೂ ಬೆಂಗಳೂರಿನ ನಿವಾಸ ಮತ್ತು ಕಚೇರಿಗಳ ಮೇಲೆ ಇ.ಡಿ ದಾಳಿ ನಡೆಸಿತ್ತು. ಹಲವಾರು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು.
ಇದೀಗ ಹೆಚ್ಚಿನ ವಿಚಾರಣೆಗಾಗಿ ನಾಗೇಂದ್ರ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ಅವರನ್ನು ಕರೆತರಲಾಗಿದೆ
ಇನ್ನು 'ನನಗೇನೂ ಗೊತ್ತಿಲ್ಲ ...ನಾನು ಯಾರಿಗೂ ಏನೂ ಕೊಟ್ಟಿಲ್ಲ' ಎಂದು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆಯುವ ವೇಳೆ ಮಾಧ್ಯಮಗಳಿಗೆ ಮಾಜಿ ಸಚಿವ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ
ಏನಿದು ಪ್ರಕರಣ ?
ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಮೇಲೆ ನಿಗಮದಲ್ಲಿ 187 ಕೋಟಿ ಹಗರಣ ಆಗಿರೋದು ಬಯಲಾಗಿತ್ತು. ಐಟಿ ಕಂಪನಿಗಳು ಮತ್ತು ಹೈದರಾಬಾದ್ ಮೂಲದ ಸಹಕಾರಿ ಬ್ಯಾಂಕ್ನ ವಿವಿಧ ಖಾತೆಗಳಿಗೆ 88.62 ಕೋಟಿ ಅಕ್ರಮವಾಗಿ ಜಮಾ ಮಾಡಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೂರಿನ ಮೇಲೆ ಸಿಬಿಐ ಮತ್ತು ಇಡಿ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ.
The Enforcement Directorate on Friday took former Minister B Nagendra into custody, as part of a money-laundering probe linked to the alleged irregularities in the Karnataka Maharshi Valmiki Scheduled Tribes Development Corporation Limited, official.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm