ಬ್ರೇಕಿಂಗ್ ನ್ಯೂಸ್
15-07-24 01:01 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 15: ಕೆಂಗಲ್ ಹನುಮಂತಯ್ಯ ಅವರ ಕನಸಿನ ಅರಮನೆ, ರಾಜ್ಯಾಡಳಿತದ ಪ್ರಾಮುಖ್ಯ ಸೌಧ ವಿಧಾನಸೌಧಕ್ಕೆ ಹೊಸ ಖದರ್ ಬಂದಿದೆ. ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ದೂರದೃಷ್ಟಿ ಯೋಜನೆ ಮತ್ತು ಯೋಚನೆಯ ಫಲವಾಗಿ 68 ವರ್ಷಗಳ ಇತಿಹಾಸವಿರುವ ವಿಧಾನಸೌಧ ಕಟ್ಟಡಕ್ಕೆ ಪುನಶ್ಚೇತನ ಸಿಕ್ಕಿದೆ.
ವಿಧಾನಸೌಧ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಹೊಂದಿರುವ ಸುಂದರ ವಾಸ್ತು ಶಿಲ್ಪವಿರುವ ಕಟ್ಟಡ. ಇಂತಹ ಮನೋಹರ ಆಡಳಿತ ಸೌಧ ಬೇರೆ ರಾಜ್ಯದಲ್ಲಿ ಕಾಣಲು ಸಾಧ್ಯವಿಲ್ಲ. ಆದರೆ ಹೊರಗಿನ ಸೌಂದರ್ಯಕ್ಕೆ ಕುಂದು ಬಾರದಂತೆ ಒಳಗಿನ ಸೌಂದರ್ಯವನ್ನೂ ಬಿಂಬಿಸಬೇಕು ಎಂದು ಕನಸು ಕಂಡವರು ಸ್ಪೀಕರ್ ಯು.ಟಿ.ಖಾದರ್. ಈ ಯೋಜನೆಗೆ ಸಾಥ್ ನೀಡಿದ್ದು ಸಿದ್ದರಾಮಯ್ಯ ಸರಕಾರ. ರಾಜ್ಯದ ಏಳೂವರೆ ಕೋಟಿ ಜನರ ಪೈಕಿ ಶಾಸಕರಾಗುವವರು 224 ಮಂದಿ. ಶಾಸಕರಾಗಿ ವಿಧಾನಸೌಧ ಪ್ರವೇಶಿಸುವುದೇ ಒಂದು ಭಾಗ್ಯ. ಅದರಲ್ಲೂ ಇಡೀ ವಿಧಾನಸೌಧಕ್ಕೆ ಸಭಾಧ್ಯಕ್ಷರಾಗುವುದು ಎಂದರೆ ಸಣ್ಣ ಮಾತಲ್ಲ. ಅದು ಯು.ಟಿ.ಖಾದರ್ ಗೆ ಕರುನಾಡು ನೀಡಿದ ದೊಡ್ಡ ಕೊಡುಗೆ ಮತ್ತು ಗೌರವ.
ವಿಧಾನಸೌಧ ಪ್ರವೇಶದಲ್ಲಿ ಎದುರುಗೊಳ್ಳುವ ಕಬ್ಬಿಣದ ಗ್ರಿಲ್ಸ್ ಇರುವ ಧೂಳು ಹಿಡಿದಿರುವ ಹಳೆಯ ಕಾರಿಡಾರ್, ಬಾಗಿಲುಗಳು ಕಟ್ಟಡದ ಕಲೆಗಾರಿಕೆಗೆ ಕಪ್ಪು ಚುಕ್ಕೆಯಾಗಿತ್ತು. ಮಣ್ಣು, ಧೂಳಿನ ಕಳೆಯಿರುವ ನೆಲ ಎದುರುಗೊಳ್ಳುತ್ತಿತ್ತು. ಹೊರದೇಶದ ವಿಐಪಿಗಳು, ಸೆಲೆಬ್ರಿಟಿಗಳು ವಿಧಾನಸೌಧಕ್ಕೆ ಭೇಟಿ ನೀಡುವಾಗ ಅವರನ್ನು ಹಳೆಯ ಗ್ರಿಲ್ ಕಿಟಕಿ, ಬಾಗಿಲುಗಳೇ ಸ್ವಾಗತಿಸುತ್ತಿದ್ದವು. ಇದಕ್ಕೆ ಬದಲಾವಣೆ ತಂದ ಸ್ಪೀಕರ್ ಯು.ಟಿ.ಖಾದರ್ ಸರಕಾರದ ಸಹಭಾಗಿತ್ವದಲ್ಲಿ ಹೊಸ ರೂಪ ನೀಡಿದ್ದಾರೆ. ರಾಜ್ಯ ಅರಣ್ಯ ಕೈಗಾರಿಕಾ ನಿಗಮದಿಂದ ಬೀಟೆ ಮತ್ತು ತೇಗದ ಮರ ಪಡೆದು ಸ್ವಾಗತ ದ್ವಾರಗಳಿಗೆ ಹೊಸ ಗೆಟಪ್ ನೀಡಿದ್ದಾರೆ. ಪ್ರಸ್ತುತ ವಿಐಪಿಗಳು, ಮಂತ್ರಿ ಮಹೋದಯರು ಸಾಗುವ ಪೂರ್ವ ಮತ್ತು ಪಶ್ಚಿಮದ ಮುಖ್ಯದ್ವಾರಗಳು ಸಾಂಪ್ರದಾಯಿಕ ಶೈಲಿಯ ಮರದ ಕೆತ್ತನೆಯಿಂದ ನಳನಳಿಸುತ್ತಿದೆ. ನೆಲಕ್ಕೆ ಹಸಿರು ಮಕಮಲ್ಲು, ಮಹಡಿ ಏರುವ ಸ್ಟೆಪ್ ಗಳಿಗೆ ಕೆಂಪು ಕಾರ್ಪೆಟ್ ಹಾಸಲಾಗಿದೆ. ಕಲಾಪ ನಡೆಯುವಲ್ಲಿ ಮತ್ತು ಅವಶ್ಯಕ ಸ್ಥಳಗಳ ಗೋಡೆಗಳಿಗೆ ರಾಜ್ಯ ಸರಕಾರದ ಲಾಂಛನ "ಗಂಡ ಭೇರುಂಡ" ಆಕೃತಿಯ ಗಡಿಯಾರ ಅಳವಡಿಸಲಾಗಿದೆ. ಒಟ್ಟಿನಲ್ಲಿ ವಿಧಾನಸೌಧದ ಒಳಾಂಗಣ ಹೊಸ ಖದರ್ ನೊಂದಿಗೆ ಕಂಗೊಳಿಸುತ್ತಿದೆ. ಇನ್ನು ಸೌಧಕ್ಕೆ ನೂರು ವರ್ಷ ಕಳೆದರೂ ಈಗಿನ ಪುನಶ್ಚೇತನ ಇತಿಹಾಸದ ಪುಟ ಸೇರಲಿದೆ. ಇದು ಕೇವಲ ಆರಂಭವಷ್ಟೆ. ಮುಂದಿನ ದಿನಗಳಲ್ಲಿ ಇಡೀ ವಿಧಾನಸೌಧದ ಒಳಾಂಗಣವನ್ನು ಹಳೆಯ ರೂಪ ನೀಡಿ ನವೀನ ಶೈಲಿಯಲ್ಲಿ ಬದಲಿಸುವ ಕನಸನ್ನು ಸ್ಪೀಕರ್ ಖಾದರ್ ಹೊಂದಿದ್ದಾರೆ.
2024 ಜುಲೈ 15 ಸೋಮವಾರ ವಿಧಾನಸಭೆ ಕಲಾಪ ಆರಂಭವಾಗುವ ಮುಂಚಿತವಾಗಿ ಸ್ಪೀಕರ್ ಯು.ಟಿ. ಖಾದರ್ ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವೀಕರಣದ ಕಾರ್ಯವನ್ನು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಸಚಿವ ಮತ್ತು ವಿಧಾನಸಭಾ ವಿಶೇಷ ಬೋರ್ಡ್ ಮೆಂಬರ್ ಎಚ್.ಕೆ. ಪಾಟೀಲ್, ಗೃಹ ಸಚಿವ ಜಿ. ಪರಮೇಶ್ವರ್, ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿಧಾನಸಭೆಯ ವಿರೋಧ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.
Vidhana Soudha get new get up photos go viral after U T Khader has been appointed as Speaker
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm