ಬ್ರೇಕಿಂಗ್ ನ್ಯೂಸ್
16-07-24 08:42 pm HK News Desk ಕರ್ನಾಟಕ
ಕಾರವಾರ, ಜುಲೈ 16: ಅಂಕೋಲಾ ಬಳಿಯ ಶಿರೂರಿನಲ್ಲಿ ಹೆದ್ದಾರಿ ಬದಿಯ ಗುಡ್ಡ ಕುಸಿದು ಬಿದ್ದು ಮಣ್ಣಿನಡಿ ಹತ್ತಕ್ಕೂ ಹೆಚ್ಚು ಮಂದಿ ಸಿಲುಕಿದ್ದು ಎಲ್ಲರೂ ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಗುಡ್ಡ ಕುಸಿದ ಪರಿಣಾಮ ಪಕ್ಕದಲ್ಲಿದ್ದ ಒಂದು ಮನೆ, ಒಂದು ಕಾರು ಮತ್ತೊಂದು ಟ್ಯಾಂಕರ್ ದುರಂತಕ್ಕೀಡಾಗಿದೆ.
ಸಂಜೆ ವೇಳೆಗೆ ಒಂದೇ ಕುಟುಂಬದ ನಾಲ್ವರ ಶವ ಮಣ್ಣಿನಡಿಯಲ್ಲಿ ಪತ್ತೆಯಾಗಿದೆ. ಲಕ್ಷ್ಮಣ ನಾಯ್ಕ, ಅವರ ಪತ್ನಿ ಶಾಂತಿ ನಾಯ್ಕ, ರೋಶನ್ ನಾಯ್ಕ್ ಮತ್ತು ಟ್ಯಾಂಕರ್ ಚಾಲಕನ ಮೃತದೇಹ ಪತ್ತೆಯಾಗಿದೆ. ಮಂಗಳೂರು- ಪಣಜಿ ರಾಷ್ಟ್ರೀಯ ಹೆದ್ದಾರಿ- 66 ಇದಾಗಿದ್ದು ಇಲ್ಲಿ ಐಆರ್ಬಿ ಕಂಪೆನಿ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸಿತ್ತು. ರಸ್ತೆ ಅಗಲೀಕರಣಕ್ಕಾಗಿ ಪಕ್ಕದ ಗುಡ್ಡವನ್ನು ಅಗೆದು ಹಾಗೇ ಬಿಡಲಾಗಿತ್ತು. ದೊಡ್ಡ ಗುಡ್ಡ ಅಗೆದಿದ್ದರಿಂದ ಭಾರೀ ಮಳೆಯಿಂದ ಸಡಿಲಗೊಂಡು ಕುಸಿದಿದೆ. ಇದರಿಂದ ಕೆಳ ಭಾಗದಲ್ಲಿದ್ದ ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು ಬಿದ್ದಿದ್ದು ಅಲ್ಲಿದ್ದ ಐವರು ಸಿಲುಕಿದ್ದರು ಎನ್ನಲಾಗಿದೆ. ಇದೇ ವೇಳೆ ಹೆದ್ದಾರಿ ಬದಿಯಲ್ಲಿದ್ದ ಕ್ಯಾಂಟೀನಲ್ಲಿ ಟ್ಯಾಂಕರ್ ನಿಲ್ಲಿಸಿ ಚಾಲಕ ಮತ್ತು ಕ್ಲೀನರ್ ಚಹಾ ಕುಡಿಯುತ್ತಿದ್ದರು.




ಗುಡ್ಡ ಕುಸಿತದಿಂದ ಕ್ಯಾಂಟೀನ್ ಸಮೇತ ಕುಸಿದು ಹೋಗಿದ್ದು ಅಲ್ಲಿದ್ದ ಇಬ್ಬರು ಟ್ಯಾಂಕರ್ ಸಿಬಂದಿ ಮತ್ತು ಕ್ಯಾಂಟೀನಲ್ಲಿದ್ದ ಗಂಡ ಹೆಂಡತಿ ಮಣ್ಣಿನಡಿಗೆ ಬಿದ್ದಿದ್ದಾರೆ. ಮಣ್ಣಿನ ಕುಸಿತಕ್ಕೆ ಪಲ್ಟಿಯಾದ ಟ್ಯಾಂಕರ್ ಪಕ್ಕದಲ್ಲೇ ಹರಿಯುವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದೆ. ಟೀ ಸ್ಟಾಲ್ ನಡೆಸುತ್ತಿದ್ದ ವ್ಯಕ್ತಿ, ಆತನ ಪತ್ನಿ, ಮಗ ಸಾವನ್ನಪ್ಪಿದ್ದಾರೆ. ಜೊತೆಗೆ ಚಹಾ ಕುಡಿಯಲು ಬಂದಿದ್ದ ಚಾಲಕನೂ ಸಾವನ್ನಪ್ಪಿದ್ದಾನೆ. ಉಳಿದವರು ಎಷ್ಟು ಮಂದಿ ಇದ್ದರೆಂದು ಪತ್ತೆಯಾಗಿಲ್ಲ. ಸ್ಥಳದಲ್ಲಿ ನೌಕಾಪಡೆ ಮತ್ತು ಇತರ ರಕ್ಷಣಾ ಪಡೆಗಳು ಕಾರ್ಯಾಚರಣೆಗೆ ಇಳಿದಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಈ ನಡುವೆ ಐಆರ್ಬಿ ರಸ್ತೆ ನಿರ್ಮಾಣ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯೇ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಒಂದು ಕಡೆ ನದಿಯಾದರೆ, ಮತ್ತೊಂದು ಕಡೆ ಗುಡ್ಡ ಇದೆ. ಗುಡ್ಡವನ್ನು ಅಗೆದು ಹೆದ್ದಾರಿ ಮಾಡಲಾಗಿದ್ದು ಮಳೆಗೆ ಗುಡ್ಡ ಕುಸಿದು ಹೆದ್ದಾರಿ ಸಹಿತ ನದಿಯತ್ತ ಬಿದ್ದಿದೆ.
Ankola Landslide, death toll increases to 10, IRB company alleged of poor quality work. The collapse, attributed to continuous heavy rains and the unscientific and incomplete work of the company contracted for the construction of the quadruple highway, occurred near the Shiruru Bommaiah temple on the Ankola-Kumta route of National Highway 66.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm