ಬ್ರೇಕಿಂಗ್ ನ್ಯೂಸ್
07-12-20 03:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.7: ದೆಹಲಿ ಮತ್ತು ಹರ್ಯಾಣದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಡಿ.8ರಂದು ದೇಶಾದ್ಯಂತ ಬಂದ್ ನಡೆಸಲು ರೈತರ ಸಂಘಟನೆಗಳು ನಿರ್ಧರಿಸಿವೆ. ಕರ್ನಾಟಕದಲ್ಲೂ ರಾಜ್ಯ ರೈತ ಸಂಘದ ವತಿಯಿಂದ ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ತಾಲೂಕು ಪ್ರದೇಶಗಳಲ್ಲಿ ಪ್ರತಿಭಟನೆ, ಬಂದ್ ನಡೆಯಲಿದೆ. ಈ ಬಗ್ಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ.
ಮಂಗಳವಾರ ರಾಜ್ಯದಾದ್ಯಂತ ಪ್ರತಿಭಟನೆ, ಅರ್ಧ ದಿನದ ವರೆಗೆ ಬಂದ್ ಮಾಡಲಾಗುವುದು. ಬುಧವಾರ ಎಲ್ಲ ಜಿಲ್ಲೆಗಳಿಂದ 50 ಸಾವಿರಕ್ಕೂ ಹೆಚ್ಚು ರೈತರು ಟ್ರಕ್, ಲಾರಿಗಳಲ್ಲಿ ರಾಜಧಾನಿಗೆ ಬರಲಿದ್ದಾರೆ. ಬುಧವಾರ ಪೂರ್ತಿಯಾಗಿ ಬೆಂಗಳೂರು ಬಂದ್ ಆಗಲಿದೆ. ರೈತರು ಮೆರವಣಿಗೆ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಡಿ.7ರಿಂದ 15ರ ವರೆಗೆ ವಿಧಾನಸಭೆ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇದರಲ್ಲಿ ಭೂಸುಧಾರಣೆ ಮಸೂದೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಇದೇ ಸಂದರ್ಭದಲ್ಲಿ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ರೈತರು ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಸಿ, ಬಳಿಕ ವಿಧಾನಸೌಧದತ್ತ ತೆರಳಲಿದ್ದಾರೆ. ಪೊಲೀಸರು ಅವಕಾಶ ನೀಡದಿದ್ದರೆ ಕೋರ್ಟ್ ಆವರಣದಲ್ಲಿ ಪ್ರತಿಭಟನೆಗೆ ಪ್ಲಾನ್ ಹಾಕಿದ್ದಾರೆ.
ಇದೇ ವೇಳೆ, ಉತ್ತರದ ರಾಜ್ಯಗಳಲ್ಲಿ ರೈತರ ಪ್ರತಿಭಟನೆಗೆ ಪ್ರತಿಪಕ್ಷಗಳು ಬೆಂಬಲ ಘೋಷಿಸಿವೆ. ಕಾಂಗ್ರೆಸ್, ಆರ್ ಜೆಡಿ, ಎಸ್ಪಿ, ಟಿಎಂಸಿ ಸೇರಿದಂತೆ ಬಹುತೇಕ ವಿಪಕ್ಷಗಳು ಬೆಂಬಲ ಘೋಷಿಸಿದ್ದು, ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ಕೇಂದ್ರ ಸರಕಾರ ತರಲುದ್ದೇಶಿಸಿರುವ ಕೃಷಿ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ಈಗಾಗ್ಲೇ ಕಳೆದ ಎರಡು ವಾರಗಳಿಂದ ದೆಹಲಿ, ಹರ್ಯಾಣ, ಉತ್ತರ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ರೈತರ ಜೊತೆಗೆ ಪ್ರತಿಭಟನೆಗಿಳಿದ ಎಸ್ಪಿ ಮುಖಂಡ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm