ಬ್ರೇಕಿಂಗ್ ನ್ಯೂಸ್
07-12-20 03:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.7: ದೆಹಲಿ ಮತ್ತು ಹರ್ಯಾಣದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಡಿ.8ರಂದು ದೇಶಾದ್ಯಂತ ಬಂದ್ ನಡೆಸಲು ರೈತರ ಸಂಘಟನೆಗಳು ನಿರ್ಧರಿಸಿವೆ. ಕರ್ನಾಟಕದಲ್ಲೂ ರಾಜ್ಯ ರೈತ ಸಂಘದ ವತಿಯಿಂದ ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ತಾಲೂಕು ಪ್ರದೇಶಗಳಲ್ಲಿ ಪ್ರತಿಭಟನೆ, ಬಂದ್ ನಡೆಯಲಿದೆ. ಈ ಬಗ್ಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ.
ಮಂಗಳವಾರ ರಾಜ್ಯದಾದ್ಯಂತ ಪ್ರತಿಭಟನೆ, ಅರ್ಧ ದಿನದ ವರೆಗೆ ಬಂದ್ ಮಾಡಲಾಗುವುದು. ಬುಧವಾರ ಎಲ್ಲ ಜಿಲ್ಲೆಗಳಿಂದ 50 ಸಾವಿರಕ್ಕೂ ಹೆಚ್ಚು ರೈತರು ಟ್ರಕ್, ಲಾರಿಗಳಲ್ಲಿ ರಾಜಧಾನಿಗೆ ಬರಲಿದ್ದಾರೆ. ಬುಧವಾರ ಪೂರ್ತಿಯಾಗಿ ಬೆಂಗಳೂರು ಬಂದ್ ಆಗಲಿದೆ. ರೈತರು ಮೆರವಣಿಗೆ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಡಿ.7ರಿಂದ 15ರ ವರೆಗೆ ವಿಧಾನಸಭೆ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇದರಲ್ಲಿ ಭೂಸುಧಾರಣೆ ಮಸೂದೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಇದೇ ಸಂದರ್ಭದಲ್ಲಿ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ರೈತರು ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಸಿ, ಬಳಿಕ ವಿಧಾನಸೌಧದತ್ತ ತೆರಳಲಿದ್ದಾರೆ. ಪೊಲೀಸರು ಅವಕಾಶ ನೀಡದಿದ್ದರೆ ಕೋರ್ಟ್ ಆವರಣದಲ್ಲಿ ಪ್ರತಿಭಟನೆಗೆ ಪ್ಲಾನ್ ಹಾಕಿದ್ದಾರೆ.
ಇದೇ ವೇಳೆ, ಉತ್ತರದ ರಾಜ್ಯಗಳಲ್ಲಿ ರೈತರ ಪ್ರತಿಭಟನೆಗೆ ಪ್ರತಿಪಕ್ಷಗಳು ಬೆಂಬಲ ಘೋಷಿಸಿವೆ. ಕಾಂಗ್ರೆಸ್, ಆರ್ ಜೆಡಿ, ಎಸ್ಪಿ, ಟಿಎಂಸಿ ಸೇರಿದಂತೆ ಬಹುತೇಕ ವಿಪಕ್ಷಗಳು ಬೆಂಬಲ ಘೋಷಿಸಿದ್ದು, ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ಕೇಂದ್ರ ಸರಕಾರ ತರಲುದ್ದೇಶಿಸಿರುವ ಕೃಷಿ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ಈಗಾಗ್ಲೇ ಕಳೆದ ಎರಡು ವಾರಗಳಿಂದ ದೆಹಲಿ, ಹರ್ಯಾಣ, ಉತ್ತರ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ರೈತರ ಜೊತೆಗೆ ಪ್ರತಿಭಟನೆಗಿಳಿದ ಎಸ್ಪಿ ಮುಖಂಡ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm