ಬ್ರೇಕಿಂಗ್ ನ್ಯೂಸ್
18-07-24 12:36 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.18: ಪಂಚೆ ತೊಟ್ಟ ರೈತನಿಗೆ ಎಂಟ್ರಿ ನಿರಾಕರಣೆ ಮಾಡಿ ಅವಮಾನ ಮಾಡಿದ ಜಿ.ಟಿ ಮಾಲ್ ನ್ನು 7 ದಿನಗಳ ಕಾಲ ಮುಚ್ಚಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಸದನದಲ್ಲಿ ಜಿ.ಟಿ ಮಾಲ್ ನಲ್ಲಿ ರೈತನಿಗೆ ಅವಮಾನ ಆದ ವಿಚಾರ ಚರ್ಚೆಗೆ ಕಾರಣವಾಯ್ತು. ಜಿಟಿ ಮಾಲ್ ಒಳಗೆ ಪಂಚೆ ಉಟ್ಟ ರೈತನನ್ನ ಬಿಡದೆ ಅವಮಾನಿಸಿದ ವಿಚಾರವಾಗಿ ಸ್ಪೀಕರ್ ಯು.ಟಿ.ಖಾದರ್ ಗರಂ ಆದರು. ಅವನು ಎಷ್ಟೇ ದೊಡ್ಡವನು ಇರಲಿ, ಅವನಿಗೆ ತೋರಿಸಬೇಕು. ಅವಮಾನ ಮಾಡಿದ್ದನ್ನು ಖಂಡಿಸಬೇಕು. ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದರು.
ಎಲ್ಲ ಮಾಲ್ ಗಳಿಗೂ ಒಂದೇ ರೂಲ್ಸ್ ಮಾಡಬೇಕು. ಪಂಚೆ ನಮ್ಮ ಸಂಸ್ಕೃತಿ ಎಂದ ಸ್ಪೀಕರ್ ಮಾತಿಗೆ ಧ್ವನಿಗೂಡಿಸಿದ ಶಾಸಕ ಲಕ್ಷಣ ಸವದಿ, ಸರ್ಕಾರದಿಂದ ಒಂದು ಆದೇಶ ಹೊರಡಿಸಲಿ, ಆ ಮಾಲ್ ಗೆ ವಾರಗಳ ಕಾಲ ಪವರ್ ಕಟ್ ಮಾಡಲಿ ಎಂದು ಆಗ್ರಹಿಸಿದರು.




ಇನ್ನು ರೈತನಿಗೆ ಅವಮಾನ ಮಾಡಿದ ಆ ಮಾಲ್ ಅನ್ನು ಮುಚ್ಚಬೇಕು ಎಂದು ಶಾಸಕ ಪ್ರಕಾಶ್ ಕೋಳಿವಾಡ ಆಗ್ರಹಿಸಿದರು.
ಕಾಂಗ್ರೆಸ್ ಸದಸ್ಯ ಅಶೋಕ್ ಪಟ್ಟಣ ಮಾತನಾಡಿ, ರಾಜ್ಯದ ಎಲ್ಲ ಕ್ಲಬ್ ಗಳು, ಮಾಲ್ ಗಳಲ್ಲಿ ಒಂದೇ ರೂಲ್ಸ್ ತರಬೇಕು. ಪಂಚೆ ಸೇರಿದಂತೆ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುವುದರಿಗೆ ಎಂಟ್ರಿ ಕೊಡಬೇಕು ಎಂದರು.
ದೇವೇಗೌಡರು, ಸಿದ್ದರಾಮಯ್ಯ ಅವರು ಪಂಚೆ ಉಡ್ತಾರೆ, ಅವರು ಕ್ಲಬ್ ಗಳಿಗೆ ಏನಾದ್ರೂ ಹೋದರೆ ಬಿಡ್ತಾರೆ. ಆದರೆ, ಬೇರೆಯವರಿಗೆ ಆ ರೂಲ್ಸ್ ಇಲ್ವಾ ಎಂದು ಸಚಿವ ಬೈರತಿ ಸುರೇಶ್ ಪ್ರಶ್ನಿಸಿದರು. ಅಲ್ಲದೆ, ಸಚಿವ ಬೈರತಿ ಸುರೇಶ್, 7 ದಿನಗಳ ಕಾಲ ಮಾಲ್ ಮುಚ್ಚಿಸುತ್ತೇವೆ. ಈಗಾಗಲೇ ಬಿಬಿಎಂಪಿ ಆಯುಕ್ತರ ಹತ್ತಿರ ಮಾತಾಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇದೆ, ಸರ್ಕಾರದ ಕ್ರಮ ಕೈಗೊಳ್ಳಬಹುದು ಎಂದರು.
ಏನಿದು ಘಟನೆ?
ಬೆಂಗಳೂರಿನ ಮಾಗಡಿ ಟೋಲ್ ಗೇಟ್ ಬಳಿಯಿರುವ ಜಿಟಿ ಮಾಲ್ ನಲ್ಲಿ ಹಾವೇರಿ ಮೂಲದ ರೈತನೋರ್ವರಿಗೆ ಅಪಮಾನವಾದ ಘಟನೆ ಜುಲೈ 16 ರಂದು ನಡೆದಿದೆ. ವಿಜಯನಗರದ ನಿವಾಸಿ ನಾಗರಾಜ್ ತಂದೆ ಹಾವೇರಿಯವರಾಗಿದ್ದು, ಬೆಂಗಳೂರಿಗೆ ಬಂದಾಗ ಸಿನಿಮಾ ತೋರಿಸಲೆಂದು ಜಿಟಿ ಮಾಲ್ಗೆ ಕರೆದುಕೊಂಡು ಹೋಗಿದ್ದರು. ಸಿನಿಮಾ ಥಿಯೇಟರ್ ಒಳಗೆ ಪ್ರವೇಶಿಸುವ ಸಂದರ್ಭದಲ್ಲಿ ತಪಾಸಣೆ ನಡೆಸುವ ಸೆಕ್ಯುರಿಟಿ ಸಿಬ್ಬಂದಿ, ರೈತ ಪಂಚೆ ಉಟ್ಟಿರುವ ಕಾರಣಕ್ಕೆ ಥಿಯೇಟರ್ ಒಳಗೆ ಬಿಡವುದಿಲ್ಲ. ಇದು ಜಿಟಿ ಮಾಲ್ ನಿಯಮವೆಂದೂ ಹೇಳಿದ್ದಾನೆ. ಎಷ್ಟೇ ಮನವಿ ಮಾಡಿದರೂ ಒಳಗೆ ಬಿಡದಿದ್ದಾಗ, ಬೇಸತ್ತ ನಾಗರಾಜ್ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದಕ್ಕೆ ನೆಟ್ಟಿಗರು ಸೇರಿದಂತೆ, ರಾಜ್ಯದಾದ್ಯಂತ ಮಾಲ್ ಸಿಬ್ಬಂದಿಗಳ ನಡೆಗೆ ಆಕ್ರೋಶ ಹೊರಹಾಕಿದ್ದರು.
Congress minister Byrathi Suresh says will close G T Mall for 7 days for insulting farmer in Bangalore by dening entry into the mall. Byrathi Suresh said have already spoken to the BBMP to take action he added.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm