ಬ್ರೇಕಿಂಗ್ ನ್ಯೂಸ್
19-07-24 10:28 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮವಾಗಿ ವರ್ಗಾಯಿಸಿಕೊಂಡ ಹಣದಲ್ಲಿ ದೊಡ್ಡ ಮೊತ್ತವನ್ನು ರಾಜ್ಯ ಸರ್ಕಾರದ ‘’ಗ್ಯಾರಂಟಿ ಕಾರ್ಡ್’’ ತಯಾರಿಸಿಕೊಟ್ಟಿದ್ದ ಕಂಪನಿಯೊಂದಕ್ಕೆ ನೀಡಲಾಗಿತ್ತು ಎಂಬ ಮಾಹಿತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಪ್ರಕರಣದ ಆರೋಪಿ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಪುನಃ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಇಡಿ ಅಧಿಕಾರಿಗಳು ಸಲ್ಲಿಸಿದ್ದ ರಿಮ್ಯಾಂಡ್ ಅರ್ಜಿಯಲ್ಲಿ ಈ ಮಾಹಿತಿ ಉಲ್ಲೇಖಿಸಲಾಗಿದೆ. ಇದರ ಬೆನ್ನಲ್ಲೇ ನ್ಯಾಯಾಲಯದ ಅನುಮತಿ ಮೇರೆಗೆ ಐದು ದಿನಗಳ ಹೆಚ್ಚುವರಿ ಕಸ್ಟಡಿ ಪಡೆದಿರುವ ಇಡಿ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.
ಆರೋಪಿ ನಾಗೇಂದ್ರ ಅವರ ಹೆಚ್ಚಿನ ವಿಚಾರಣೆ ಕುರಿತಂತೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿರುವ ಇಡಿ ಅಧಿಕಾರಿಗಳು, ಪ್ರಕರಣದಲ್ಲಿ ವಾಲ್ಮೀಕಿ ನಿಗಮದ ಹಣದಲ್ಲಿ ಗ್ಯಾರಂಟಿ ಕಾರ್ಡ್ ತಯಾರಿಕೆ ಕಂಪನಿಯೂ ಫಲಾನುಭವಿಯಾಗಿದೆ. ಈ ಕಂಪನಿಗೆ ಎಷ್ಟು ಮೊತ್ತ ನೀಡಲಾಗಿದೆ. ಯಾವ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗಿದೆ ಎಂಬುದು ಸೇರಿದಂತೆ ಹಲವು ಮಾಹಿತಿಯನ್ನು ಆರೋಪಿಯ ವಿಚಾರಣೆ ನಡೆಸಿ ಪಡೆಯಬೇಕಿದೆ ಎಂದು ವಿವರಿಸಿದ್ದಾರೆ.
ಮೂರು ಮೊಬೈಲ್ ನಾಶಪಡಿಸಿದ್ದ ನಾಗೇಂದ್ರ
ವಾಲ್ಮೀಕಿ ನಿಗಮದ 187 ಕೋಟಿ ರೂ.ಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಳ್ಳಲು ರೂಪಿಸಿದ್ದ ಸಂಚಿನಲ್ಲಿ ಮಾಜಿ ಸಚಿವ ನಾಗೇಂದ್ರ ಪ್ರಧಾನ ಪಾತ್ರ ವಹಿಸಿದ್ದಾರೆ. ಅಕ್ರಮ ಬೆಳಕಿಗೆ ಬರುತ್ತಲೇ ಡಿಜಿಟಲ್ ಸಾಕ್ಷ್ಯಗಳಿದ್ದ ಮೂರು ಮೊಬೈಲ್ ಗಳನ್ನು ನಾಶಪಡಿಸಿದ್ದಾರೆ ಎಂದು ಇಡಿ ಅಧಿಕಾರಿಗಳು ಕೋರ್ಟಿಗೆ ತಿಳಿಸಿದ್ದಾರೆ. ಇದಲ್ಲದೆ, ನಾಗೇಂದ್ರ ಹಾಗೂ ಅವರ ಕುಟುಂಬ ಸದಸ್ಯರಿಗೆ ಕಳೆದ ಎರಡು ವರ್ಷಗಳಿಂದ ಒಂದು ನಿರ್ದಿಷ್ಟ ಕಂಪನಿ ವಿಮಾನ ಪ್ರಯಾಣದ ಟಿಕೆಟ್ ನಿರಂತರವಾಗಿ ಬುಕ್ ಮಾಡಿರುವುದಕ್ಕೆ ಸಾಕ್ಷ್ಯಗಳು ಸಿಕ್ಕಿವೆ. ನಾಗೇಂದ್ರ ಹಾಗೂ ಆ ಕಂಪನಿ ನಡುವಿನ ಸಂಬಂಧ ಏನು, ಯಾವ ವಿಚಾರಕ್ಕಾಗಿ ಟಿಕೆಟ್ ಬುಕ್ ಮಾಡಿಕೊಳ್ಳಲಾಗಿತ್ತು. ಪ್ರಯಾಣದ ಟಿಕೆಟ್ ಮೊತ್ತ ಎಷ್ಟಾಗಿತ್ತು ಎಂಬುದು ಸೇರಿದಂತೆ ಹಲವು ವಿಚಾರಗಳ ಕುರಿತು ಆರೋಪಿ ಸಮ್ಮುಖದಲ್ಲಿ ತನಿಖೆ ನಡೆಯಬೇಕಿದೆ ಎಂದು ಇಜಿ ಅಧಿಕಾರಿಗಳು ಕೋರ್ಟಿನಲ್ಲಿ ತಿಳಿಸಿದ್ದಾರೆ.
A special court here on Thursday extended by five days the Enforcement Directorate (ED) custody of former Karnataka Minister B Nagendra in connection with a money laundering probe linked to alleged irregularities in the Karnataka Maharshi Valmiki Scheduled Tribes Development Corporation Ltd.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
07-05-25 12:20 pm
HK News Desk
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm