ಬ್ರೇಕಿಂಗ್ ನ್ಯೂಸ್
22-07-24 10:21 pm HK News Desk ಕರ್ನಾಟಕ
ಮೈಸೂರು, ಜುಲೈ 22: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವುದು ನಾನೂರು, ಐನೂರು ಕೋಟಿ ರೂಪಾಯಿ ಹಗರಣ ಆಲ್ಲ. ಕನಿಷ್ಠ ಮೂರ್ನಾಲ್ಕು ಸಾವಿರ ಕೋಟಿ ರೂಪಾಯಿ ಹಗರಣ ಆಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಮುಡಾ ಹಗರಣ ವಿಚಾರವಾಗಿ ಮೊದಲ ಬಾರಿಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಮುಡಾ ಹಗರಣ ಕುರಿತು ಸಂಪೂರ್ಣ ತನಿಖೆ ಮಾಡಿಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಮನಸ್ಥಿತಿ ಸಿದ್ದರಾಮಯ್ಯ ಅವರಿಗೆ ಇಲ್ಲ" ಎಂದು ಹೇಳಿದರು.
"ಸಿಎಂ ಸಿದ್ದರಾಮಯ್ಯ ಸಾಹೇಬ್ರ ಬಗ್ಗೆ ಸೈದ್ಧಾಂತಿಕವಾಗಿ ವಿರೋಧ ಅಷ್ಟೇ. ಅಭಿವೃದ್ಧಿ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಸಿಎಂ ತಮಗೆ ಬಂದ ಸೈಟ್ ಗಳನ್ನ ವಾಪಸ್ ಕೊಟ್ಟು ತನಿಖೆ ಮಾಡಿಸುತ್ತಾರೆ ಎಂದು ನಾನು ನಂಬಿದೆ. ಆದರೆ ಆ ರೀತಿ ಮಾಡದೆ 62 ಕೋಟಿ ಪರಿಹಾರ ಕೇಳಿದ್ದಾರೆ. ಇದು ನನಗೆ ಸಿಎಂ ಬಗ್ಗೆ ದೊಡ್ಡ ಮಟ್ಟದ ನಿರಾಸೆ ಉಂಟು ಮಾಡಿದೆ. ಸಿಎಂ ಮೇಲೆ ಇದ್ದ ಅಭಿಮಾನವೂ ಕೂಡ ಈ ಪ್ರಕರಣದಿಂದ ಕಡಿಮೆಯಾಗಿದೆ" ಎಂದರು.
"2019 ರಲ್ಲಿ ವಿ. ಸೋಮಣ್ಣ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ 7,500 ಮುಡಾ ಖಾಲಿ ನಿವೇಶನಗಳ ಹರಾಜಿಗೆ ಮುಂದಾಗಿದ್ದರು. ಅಷ್ಟರಲ್ಲೇ ಅವರಿಗೆ ಗೇಟ್ ಪಾಸ್ ಸಿಕ್ಕಿತ್ತು. ಮುಡಾ ಆಯುಕ್ತರಾದ ಕಾಂತರಾಜ್ ಅವರಿಗೂ ಗೇಟ್ ಪಾಸ್ ಸಿಕ್ಕತ್ತು. ಇದು ಮುಡಾದ ವ್ಯವಸ್ಥೆ. ಆದರೆ ಸಿದ್ದರಾಮಯ್ಯ ಕಾಲದಲ್ಲಾದ್ರು ಇದು ಕ್ಲೀನ್ ಆಗುತ್ತೆ ಅಂದುಕೊಂಡೆ. ಕಳೆದ ನಾಲ್ಕು ವರ್ಷಗಳಿಂದ ಈ ಹಗರಣ ನಡೆದಿದೆ" ಎಂದು ದೂರಿದರು.
ಶಕ್ತಿ ಯೋಜನೆಯಿಂದ ಜನ ಖಾಸಗಿ ಬಸ್ ಹತ್ತುತ್ತಿಲ್ಲ: "ಸರ್ಕಾರದ ಶಕ್ತಿ ಯೋಜನೆಯಿಂದ ಜನ ಖಾಸಗಿ ಬಸ್ಗಳನ್ನು ಹತ್ತುತ್ತಿಲ್ಲ. ಇದರಿಂದ ಖಾಸಗಿ ಬಸ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈ ಬಗ್ಗೆ ಖಾಸಗಿ ವಾಹನಗಳಿಗೆ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಆಳವಡಿಕೆಗೆ ಕೇಂದ್ರ ಸರ್ಕಾರ ನಿಯಮ ಜಾರಿಗೆ ತಂದಿದೆ. ಈ ಮಧ್ಯ ಜಿಪಿಎಸ್ ಅಳವಡಿಸಲು ಒಂದ ರಿಂದ ಎರಡು ಸಾವಿರ ರೂ. ಖರ್ಚಾಗುತ್ತದೆ. ಆದರೆ ಜಿಪಿಎಸ್ ಅಳವಡಿಕೆಗೆ ಖಾಸಗಿ ಕಂಪನಿ 12 ಸಾವಿರ ನಿಗದಿ ಮಾಡಿರುವುದು ಸರಿಯಲ್ಲ, ಇದನ್ನ ವಾಪಸ್ ಪಡೆಯಬೇಕು. ಲೋಪವನ್ನ ಸರಿಮಾಡಬೇಕು" ಎಂದು ಆಗ್ರಹಿಸಿದರು.
Mysuru former MP Pratap Simha slams CM Siddaramaiah, on muda scam, says have lost little respect for CM.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm