ಬ್ರೇಕಿಂಗ್ ನ್ಯೂಸ್
22-07-24 10:21 pm HK News Desk ಕರ್ನಾಟಕ
ಮೈಸೂರು, ಜುಲೈ 22: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವುದು ನಾನೂರು, ಐನೂರು ಕೋಟಿ ರೂಪಾಯಿ ಹಗರಣ ಆಲ್ಲ. ಕನಿಷ್ಠ ಮೂರ್ನಾಲ್ಕು ಸಾವಿರ ಕೋಟಿ ರೂಪಾಯಿ ಹಗರಣ ಆಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಮುಡಾ ಹಗರಣ ವಿಚಾರವಾಗಿ ಮೊದಲ ಬಾರಿಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಮುಡಾ ಹಗರಣ ಕುರಿತು ಸಂಪೂರ್ಣ ತನಿಖೆ ಮಾಡಿಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಮನಸ್ಥಿತಿ ಸಿದ್ದರಾಮಯ್ಯ ಅವರಿಗೆ ಇಲ್ಲ" ಎಂದು ಹೇಳಿದರು.
"ಸಿಎಂ ಸಿದ್ದರಾಮಯ್ಯ ಸಾಹೇಬ್ರ ಬಗ್ಗೆ ಸೈದ್ಧಾಂತಿಕವಾಗಿ ವಿರೋಧ ಅಷ್ಟೇ. ಅಭಿವೃದ್ಧಿ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಸಿಎಂ ತಮಗೆ ಬಂದ ಸೈಟ್ ಗಳನ್ನ ವಾಪಸ್ ಕೊಟ್ಟು ತನಿಖೆ ಮಾಡಿಸುತ್ತಾರೆ ಎಂದು ನಾನು ನಂಬಿದೆ. ಆದರೆ ಆ ರೀತಿ ಮಾಡದೆ 62 ಕೋಟಿ ಪರಿಹಾರ ಕೇಳಿದ್ದಾರೆ. ಇದು ನನಗೆ ಸಿಎಂ ಬಗ್ಗೆ ದೊಡ್ಡ ಮಟ್ಟದ ನಿರಾಸೆ ಉಂಟು ಮಾಡಿದೆ. ಸಿಎಂ ಮೇಲೆ ಇದ್ದ ಅಭಿಮಾನವೂ ಕೂಡ ಈ ಪ್ರಕರಣದಿಂದ ಕಡಿಮೆಯಾಗಿದೆ" ಎಂದರು.
"2019 ರಲ್ಲಿ ವಿ. ಸೋಮಣ್ಣ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ 7,500 ಮುಡಾ ಖಾಲಿ ನಿವೇಶನಗಳ ಹರಾಜಿಗೆ ಮುಂದಾಗಿದ್ದರು. ಅಷ್ಟರಲ್ಲೇ ಅವರಿಗೆ ಗೇಟ್ ಪಾಸ್ ಸಿಕ್ಕಿತ್ತು. ಮುಡಾ ಆಯುಕ್ತರಾದ ಕಾಂತರಾಜ್ ಅವರಿಗೂ ಗೇಟ್ ಪಾಸ್ ಸಿಕ್ಕತ್ತು. ಇದು ಮುಡಾದ ವ್ಯವಸ್ಥೆ. ಆದರೆ ಸಿದ್ದರಾಮಯ್ಯ ಕಾಲದಲ್ಲಾದ್ರು ಇದು ಕ್ಲೀನ್ ಆಗುತ್ತೆ ಅಂದುಕೊಂಡೆ. ಕಳೆದ ನಾಲ್ಕು ವರ್ಷಗಳಿಂದ ಈ ಹಗರಣ ನಡೆದಿದೆ" ಎಂದು ದೂರಿದರು.
ಶಕ್ತಿ ಯೋಜನೆಯಿಂದ ಜನ ಖಾಸಗಿ ಬಸ್ ಹತ್ತುತ್ತಿಲ್ಲ: "ಸರ್ಕಾರದ ಶಕ್ತಿ ಯೋಜನೆಯಿಂದ ಜನ ಖಾಸಗಿ ಬಸ್ಗಳನ್ನು ಹತ್ತುತ್ತಿಲ್ಲ. ಇದರಿಂದ ಖಾಸಗಿ ಬಸ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈ ಬಗ್ಗೆ ಖಾಸಗಿ ವಾಹನಗಳಿಗೆ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಆಳವಡಿಕೆಗೆ ಕೇಂದ್ರ ಸರ್ಕಾರ ನಿಯಮ ಜಾರಿಗೆ ತಂದಿದೆ. ಈ ಮಧ್ಯ ಜಿಪಿಎಸ್ ಅಳವಡಿಸಲು ಒಂದ ರಿಂದ ಎರಡು ಸಾವಿರ ರೂ. ಖರ್ಚಾಗುತ್ತದೆ. ಆದರೆ ಜಿಪಿಎಸ್ ಅಳವಡಿಕೆಗೆ ಖಾಸಗಿ ಕಂಪನಿ 12 ಸಾವಿರ ನಿಗದಿ ಮಾಡಿರುವುದು ಸರಿಯಲ್ಲ, ಇದನ್ನ ವಾಪಸ್ ಪಡೆಯಬೇಕು. ಲೋಪವನ್ನ ಸರಿಮಾಡಬೇಕು" ಎಂದು ಆಗ್ರಹಿಸಿದರು.
Mysuru former MP Pratap Simha slams CM Siddaramaiah, on muda scam, says have lost little respect for CM.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm