ಬ್ರೇಕಿಂಗ್ ನ್ಯೂಸ್
26-07-24 09:27 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 26: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣ ರಾಜ್ಯದಲ್ಲಿ ರಾಜಕೀಯ ಜಟಾಪಟಿಗೆ ಕಾರಣವಾಗಿರುವಾಗಲೇ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಮುಡಾ ನಿವೇಶನ ಬದಲಿಗೆ ಸೈಟ್ ಪಡೆದುಕೊಂಡಿರುವ ಬಿಜೆಪಿ-ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ ಮಾಡಿ ಬೈರತಿ ಸುರೇಶ್ ವಿಪಕ್ಷಗಳಿಗೆ ನೇರ ಟಾಂಗ್ ನೀಡಿದ್ದಾರೆ. ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್ಡಿ ಕುಮಾರಸ್ವಾಮಿ ಅವರೂ ಮುಡಾ ನಿವೇಶನ ಪಡೆದವರಲ್ಲಿ ಇದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಸುರೇಶ್, ಸಿದ್ದರಾಮಯ್ಯನವರ ಕುಟುಂಬಕ್ಕೆ ಪರ್ಯಾಯ ನಿವೇಶನ ದೊರೆತಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರೂ ಮುಡಾದಿಂದ ನಿವೇಶನ ಪಡೆದಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮುಡಾದಿಂದ 21 ಸಾವಿರ ಚದರ ಅಡಿ ಜಾಗ ಮಂಜೂರಾಗಿದ್ದು, ಬಿಜೆಪಿ ಮುಖಂಡರಾದ ಎಚ್.ವಿಶ್ವನಾಥ್ ಮತ್ತಿತರರಿಗೂ ನಿವೇಶನ ಹಂಚಿಕೆ ಮಾಡಲಾಗಿದೆ ಎಂದರು.
ಜೆಡಿಎಸ್ ಶಾಸಕ ಜಿಟಿ ದೇವೇಗೌಡರಿಗೆ ಎರಡು ಕಡೆ ಪರ್ಯಾಯ ಜಮೀನು ಮಂಜೂರು ಮಾಡಲಾಗಿದೆ ಎಂದು ಸಚಿವ ಸುರೇಶ್ ಹೇಳಿದ್ದಾರೆ. ವಿರೋಧ ಪಕ್ಷಗಳಿಗೆ ಲಗತ್ತಿಸಿರುವ ಇತರ ರಾಜಕೀಯ ನಾಯಕರಿಗೆ ಮುಡಾ ನೀಡಿರುವ ಪರ್ಯಾಯ ನಿವೇಶನಗಳ ಪಟ್ಟಿಯನ್ನೂ ಅವರು ಬಿಡುಗಡೆ ಮಾಡಿದ್ದಾರೆ.
ಮುಡಾದಿಂದ ಪರ್ಯಾಯ ನಿವೇಶನಗಳನ್ನು ಪಡೆದಿರುವ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಹೆಸರನ್ನು ಬಹಿರಂಗಪಡಿಸಲು ಅವಕಾಶ ನೀಡುವಂತೆ ಸ್ಪೀಕರ್ ಯುಟಿ ಖಾದರ್ ಅವರನ್ನು ಒತ್ತಾಯಿಸಿದ್ದೆ. ಆದರೆ, ಸ್ಪೀಕರ್ ಇದಕ್ಕೆ ಅನುಮತಿ ನಿರಾಕರಿಸಿದ್ದರು ಎಂದು ಹೇಳಿದರು.
To counter allegations by the opposition BJP and JD(S) of irregularities in allotment of sites to Karnataka Chief Minister Siddaramaiah’s wife by the Mysuru Urban Development Authority (MUDA), Urban Development Minister Byrathi Suresh released a list of beneficiaries that included Union Industries Minister H.D. Kumaraswamy, JD(S) MLAs S. R. Mahesh and G.T. Deve Gowda, MLC C.N. Manje Gowda, and BJP MLC H. Vishwanath.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm