ಬ್ರೇಕಿಂಗ್ ನ್ಯೂಸ್
26-07-24 10:39 pm HK News Desk ಕರ್ನಾಟಕ
ಕಾರವಾರ, ಜುಲೈ 26: ಅಂಕೋಲಾ ಗುಡ್ಡ ಕುಸಿತದ ಕಾರ್ಯಾಚರಣೆ 11ನೇ ದಿನ ಮುಂದುವರಿದರೂ, ಯಾವುದೇ ಫಲ ಸಿಕ್ಕಿಲ್ಲ. ಇಸ್ರೋ ಮತ್ತು ನೇವಿ ತಜ್ಞರು ನಡೆಸಿದ ಡ್ರೋಣ್ ಕ್ಯಾಮರಾ ಪರಿಶೀಲನೆಯಲ್ಲಿ ರಸ್ತೆಯಿಂದ 60 ಮೀಟರ್ ದೂರದಲ್ಲಿ ನದಿಯ ಮಧ್ಯೆ ಲಾರಿಯ ಅವಶೇಷ ಇದೆಯೆಂಬ ಮಾಹಿತಿ ಸಿಕ್ಕಿದೆ. ಆದರೆ, ಭಾರೀ ಮಳೆಯ ಕಾರಣ ನದಿಯಲ್ಲಿ ಪ್ರವಾಹದ ರೀತಿ ನೀರು ಹರಿಯುತ್ತಿದ್ದು, ಇದರಿಂದಾಗಿ ಸ್ಕೂಬಾ ಡೈವರ್ ಗಳು ನೀರಿನಾಳಕ್ಕೆ ಇಳಿಯಲು ಸಾಧ್ಯವಾಗಿಲ್ಲ.
ನೇವಿ ಮಾಹಿತಿ ಪ್ರಕಾರ, 15-20 ಅಡಿ ಆಳದಲ್ಲಿ ಲಾರಿ ಇದೆ ಎನ್ನಲಾಗುತ್ತಿದೆ. ಆದರೆ, ನೀರಿನಲ್ಲಿ ಭಾರೀ ಸೆಳೆತ ಇರುವುದು ಮತ್ತು ಮಣ್ಣು, ಕಲ್ಲಿನೊಂದಿಗೆ ತೀವ್ರ ಗತಿಯಲ್ಲಿ ಸಾಗುವುದರಿಂದ ಅದರ ನಡುವೆ ಆಳಕ್ಕಿಳಿದರೂ, ಯಾವುದೇ ದೃಶ್ಯ ಕಣ್ಣಿಗೆ ಕಾಣದು ಎನ್ನುವುದು ಸ್ಕೂಬಾ ಡೈವರ್ ಗಳ ವಾದ. ಸಮುದ್ರದಲ್ಲಿ ಡೈವ್ ಮಾಡುವುದು ಸುಲಭ ಮತ್ತು ಆಳಕ್ಕಿಳಿದು ನೆಲವನ್ನು ನೋಡುವುದೂ ಸಾಧ್ಯ. ಆದರೆ, ರಭಸದಲ್ಲಿ ಮಣ್ಣು, ಕಸಗಳ ಜೊತೆಗೆ ಹರಿಯುವ ನದಿ ನೀರಿನಲ್ಲಿ ಆಳಕ್ಕಿಳಿದು ಅವಶೇಷ ಪತ್ತೆ ಮಾಡಲು ಕಷ್ಟ. ನದಿ ನೀರಿಗಿಳಿದರೂ, ಹೊರ ಬರುವುದೇ ಕಷ್ಟ ಎಂದು ನೇವಿ ಅಧಿಕಾರಿಗಳು ಹೇಳುತ್ತಾರೆ.


ಇದೇ ವೇಳೆ, ಕೇರಳದ ಪಿಡಬ್ಲ್ಯುಡಿ ಮತ್ತು ಪ್ರವಾಸೋದ್ಯಮ ಸಚಿವ ಪಿ.ಎ. ಮಹಮ್ಮದ್ ರಿಯಾಸ್ ಮತ್ತು ಶಾಸಕ ಕೆಎಂ ಸಸೀಂದ್ರನ್ ದುರಂತ ನಡೆದಿರುವ ಸ್ಥಳಕ್ಕೆ ಆಗಮಿಸಿದ್ದಾರೆ. ಈಗಾಗಲೇ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಕನ್ನಡ ಮತ್ತು ಮಲೆಯಾಳ ಭಾಷೆ ಅರಿತಿರುವ ಕಾರಣ ದುರಂತ ಜಾಗದಲ್ಲೇ ಬೀಡು ಬಿಟ್ಟಿದ್ದು, ಮಲೆಯಾಳಂ ವಾಹಿನಿಗಳಿಗೆ ಸ್ಥಳದಲ್ಲಿನ ಬೆಳವಣಿಗೆ ಬಗ್ಗೆ ಮಾಹಿತಿಗಳನ್ನು ನೀಡುತ್ತಿದ್ದಾರೆ. ಇಡೀ ಕೇರಳದಲ್ಲಿ ಜನರು ಲಾರಿ ಚಾಲಕ ಅರ್ಜುನ್ ಜೀವಂತ ಬರುವಂತೆ ಹಾರೈಸುತ್ತಿದ್ದಾರೆ. ಕೇರಳದ ಲೀಡಿಂಗ್ ಚಾನೆಲ್ಗಳು ಅರ್ಜುನ್ ನಾಪತ್ತೆ ಸುದ್ದಿಯನ್ನೇ ಇಡೀ ದಿನ ಪ್ರಮುಖವಾಗಿ ಬಿತ್ತರಿಸುತ್ತಿದ್ದು, ಇಡೀ ದೇಶದ ಗಮನ ಸೆಳೆಯುವಂತೆ ಮಾಡಿದೆ.
The search for three people including Kozhikode native Arjun, who went missing in a massive landslide, was severely hindered by heavy rain in Shirur on Friday. The downpour began just as Indian Navy scuba divers were preparing to dive into the deep waters of the Gangavali River.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm