ಬ್ರೇಕಿಂಗ್ ನ್ಯೂಸ್
28-07-24 05:48 pm HK News Desk ಕರ್ನಾಟಕ
ಮೈಸೂರು, ಜುಲೈ.28: ಮೈಸೂರು ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿಯ ಹಣೆಗೆ ಚಾಮರಾಜನಗರದ ಸಂಸದ ಸುನೀಲ್ ಬೋಸ್ ಕುಂಕುಮ ಇಟ್ಟಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಮೊನ್ನೆ (ಜುಲೈ 26) ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮರಾಜನಗರದ ನೂತನ ಸಂಸದ ಸುನೀಲ್ ಬೋಸ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಚಾಮುಂಡೇಶ್ವರಿ ತಾಯಿ ಗರ್ಭಗುಡಿಯಲ್ಲಿ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಬಿ.ಕೆ. ಸವಿತಾ ಅವರ ಹಣೆಗೆ ಕುಂಕುಮ ಇಟ್ಟಿದ್ದಾರೆ. ಅಲ್ಲದೇ ತಾಯಿಯ ಆಶೀರ್ವಾದದ ಪ್ರಸಾದವನ್ನು ಸಹ ಅರ್ಚಕರು ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಬಿ.ಕೆ. ಸವಿತಾ ಅವರಿಗೆ ನೀಡಿದ್ದಾರೆ.
ಈ ಫೋಟೋಗಳು ಸದ್ಯ ವೈರಲ್ ಆಗುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ಸಂಸದರೊಬ್ಬರು ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಸಂಗತಿ ಇದೀಗ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಚಾಮುಂಡಿ ಬೆಟ್ಟಕ್ಕೆ ಸಂಸದ ಸುನೀಲ್ ಬೋಸ್ ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಜೊತೆಯಾಗಿ ಬಂದಿದ್ದರು. ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಜೊತೆಗೆ ಬೆಂಬಲಿಗರ ಸಮ್ಮುಖದಲ್ಲೇ ನಿರ್ದೇಶಕಿ ಸವಿತಾ ಅವರ ಹಣೆಗೆ ಸುನೀಲ್ ಬೋಸ್ ಕುಂಕುಮ ಇಟ್ಟಿದ್ದರು. ಘಟನೆಯ ವಿಡಿಯೋ, ಫೋಟೊಗಳು ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಚಾಮರಾಜನಗರ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಸುನೀಲ್ ಬೋಸ್ ಚುನಾವಣಾ ಆಯೋಗಕ್ಕೆ ಅಫಿಡೆವಿಟ್ ಸಲ್ಲಿಸುವ ವೇಳೆ ಹೆಂಡತಿ ಮಕ್ಕಳ ಹಾಗೂ ಹಿಂದೂ ಅವಿಭಕ್ತ ಕುಟುಂಬ ಬಗ್ಗೆ ನಿಖರವಾದ ಮಾಹಿತಿ ನೀಡಿರಲಿಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆಯಾಗಿಲ್ಲ ಎಂದು ಸುನೀಲ್ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು ಎನ್ನಲಾಗಿದೆ.
ಸುನೀಲ್ ಬೋಸ್ ತಮ್ಮ ವೈವಾಹಿಕ ಜೀವನವನ್ನು ಮರೆಮಾಚಿದ್ದರು. ಇದಕ್ಕೆ ಪ್ರತಿಯಾಗಿ ಚಾಮರಾಜನಗರ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಕೂಡ ನೀಡಿತ್ತು. ಸುನೀಲ್ ಬೋಸ್ ಅವರು ಎಂ.ಕೆ. ಸವಿತಾ ಅವರನ್ನು ಮದುವೆಯಾಗಿದ್ದು, ಆರು ವರ್ಷದ ಹೆಣ್ಣುಮಗುವಿದೆ ಎಂದು ಫೋಟೊ ಸಹಿತ ದೂರು ನೀಡಿದ್ದರು.
ಇದೀಗ ಚಾಮುಂಡಿ ಬೆಟ್ಟದ ಫೋಟೋ ಸಖತ್ ವೈರಲ್ ಆಗುತ್ತಿದ್ದು, ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ಈ ಬಾರಿ ಸಂಸದರ ಫೋಟೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳಿಗೆ ಮತ್ತೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
MP Sunil Bose picture of temple with lady KAS officer goes viral. MP who had stated that he wasn't married in the affidavit was seen keeping kumkum on kas lady officer as wife at temple in Mysuru.The picture has gone viral on social media
02-01-26 04:13 pm
HK News Desk
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm