ಬ್ರೇಕಿಂಗ್ ನ್ಯೂಸ್
28-07-24 10:44 pm HK News Desk ಕರ್ನಾಟಕ
ಕಾರವಾರ, ಜುಲೈ 28: ಅಂಕೋಲಾದ ಶಿರೂರಿನ ಗುಡ್ಡ ಕುಸಿದ ಪ್ರದೇಶದಲ್ಲಿ 12 ದಿನಗಳ ಪರ್ಯಂತ ನಡೆದ ಕಾರ್ಯಾಚರಣೆಯನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ. ನದಿಯಲ್ಲಿ ನಿಲ್ಲದ ಕೆಸರು ನೀರಿನ ಪ್ರವಾಹ ಮತ್ತು ಮುಂದಿನ 21 ದಿನಗಳ ಕಾಲ ನಿರಂತರ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಗೊಳಿಸಲು ನಿರ್ಧರಿಸಿದೆ.
ಭಾನುವಾರ 12ನೇ ದಿನದ ಕಾರ್ಯಾಚರಣೆಯಲ್ಲಿ ನೌಕಾಪಡೆ ಯೋಧರು ಮತ್ತು ಈಶ್ವರ್ ಮಲ್ಪೆ ತಂಡದ ಸದಸ್ಯರು ನದಿಯಲ್ಲಿ ಮುಳುಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಕೆಸರು ನೀರಿನಿಂದಾಗಿ ನದಿಯಲ್ಲಿ ಮುಳುಗಿದ ತಂಡದ ಸದಸ್ಯರಿಗೆ ಕಾರ್ಯಾಚರಣೆ ಸಾಧ್ಯವಾಗಿಲ್ಲ. ಬಿರುಸಿನಿಂದ ಸಾಗುತ್ತಿರುವ ಮಣ್ಣು ಮಿಶ್ರಿತ ನೀರಿನಿಂದಾಗಿ ಆಳದಲ್ಲಿ ಬರಿಗಣ್ಣಿಗೆ ಸ್ಪಷ್ಟ ಗೋಚರ ಸಾಧ್ಯವಾಗುತ್ತಿಲ್ಲ. ಗುಡ್ಡ ಕುಸಿತದಿಂದ ಮರಗಳು, ಕಟ್ಟಡದ ಶೀಟುಗಳು, ಕಲ್ಲುಗಳು, ಮರದ ದಿಮ್ಮಿಗಳು ನದಿಯ ಆಳದಲ್ಲಿ ಕಂಡುಬರುತ್ತಿದ್ದು ಬೇರಾವುದೇ ಸ್ಪಷ್ಟ ಚಿತ್ರಣ ಸಿಗುತ್ತಿಲ್ಲ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಕಾರವಾರ ಶಾಸಕ ಸತೀಶ್ ಸೈಲ್ ಅಧಿಕಾರಿಗಳ ಜೊತೆಗಿನ ಸಭೆಯ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಇನ್ನೆರಡು ದಿನದಲ್ಲಿ ಕೇರಳದ ತ್ರಿಶ್ಶೂರಿನಿಂದ ಡ್ರೆಡ್ಜಿಂಗ್ ಮೆಷಿನ್ ತರಲಾಗುತ್ತದೆ. ನಾವು ಖರ್ಚು ವೆಚ್ಚದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಎನ್ ಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ಪಡೆಗಳು ನಿರಂತರ ಕಾರ್ಯಾಚರಣೆ ನಡೆಸಿವೆ. ನದಿಯ ಆಳದಲ್ಲಿ ಟ್ರಕ್ ಇರುವುದನ್ನು ಪತ್ತೆ ಮಾಡಲಾಗಿದೆ. ಮರದ ದಿಮ್ಮಿಗಳ ಸಹಿತ ಲಾರಿ ಅಂದಾಜು 25 ಟನ್ ಭಾರ ಹೊಂದಿದ್ದು, ಅದರಲ್ಲಿನ ಮರದ ದಿಮ್ಮಿಗಳನ್ನು ಖಾಲಿ ಮಾಡಿಯೇ ನದಿಯಿಂದ ಮೇಲೆತ್ತಬೇಕಾಗುತ್ತದೆ.
ಕೆಸರು ಮಣ್ಣು, ಕಲ್ಲುಗಳು, ದೊಡ್ಡ ಆಲದ ಮರವೊಂದು ಲಾರಿಯ ಮೇಲೆ ಬಿದ್ದಿರುವ ಸಾಧ್ಯತೆಯಿದೆ. ಅದರ ಮೇಲಿನಿಂದ ನದಿಯ ನೀರು ಹರಿಯುತ್ತಿದೆ. ನಾವು ಅರ್ಜುನ್ ಪತ್ತೆಗಾಗಿ ಸಾಕಷ್ಟು ಶ್ರಮ ಹಾಕಿದ್ದೇವೆ. ಅಲ್ಲದೆ, ಇನ್ನಿಬ್ಬರ ಹುಡುಕಾಟವನ್ನೂ ಮಾಡಿದ್ದೇವೆ. ನಾಪತ್ತೆಯಾಗಿರುವ ಇನ್ನೊಬ್ಬರ ಪುತ್ರಿ ತನ್ನ ತಂದೆಯ ಅಂಗಿಯ ತುಂಡನ್ನಾದರೂ ಹುಡುಕಿ ಕೊಡಿ ಎಂದು ಹೇಳುತ್ತಿದ್ದಾರೆ. ಕಾರ್ಯಾಚರಣೆ ಬಗ್ಗೆ ನಾವು ಹಲವಾರು ಕಡೆಯಿಂದ ಅಭಿಪ್ರಾಯ ಪಡೆದಿದ್ದೇವೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿಯೂ ನಿರಂತರ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾನುವಾರ ಸಂಜೆಯ ವೇಳೆಗೆ ಕಾರ್ಯಾಚರಣೆಯನ್ನು ಸದ್ಯಕ್ಕೆ ನಿಲ್ಲಿಸಲು ನಿರ್ಧರಿಸಲಾಗಿದೆ.
ಕರ್ನಾಟಕ ಮುಖ್ಯಮಂತ್ರಿಗೆ ಪಿಣರಾಯಿ ಪತ್ರ
ಇದರ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕರ್ನಾಟಕ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಕಾರ್ಯಾಚರಣೆ ನಿಲ್ಲಿಸದಂತೆ ಮನವಿ ಮಾಡಿದ್ದಾರೆ. ಕಾರ್ಯಾಚರಣೆ ನಿಲ್ಲಿಸಲಾಗುತ್ತಿದೆ ಎನ್ನುವ ವರದಿಗಳು ಬರುತ್ತಿದ್ದು, ಯಾವುದೇ ಕಾರಣಕ್ಕೂ ಪಾಸಿಟಿವ್ ರಿಸಲ್ಟ್ ಬಾರದೇ ಹುಡುಕಾಟ ಕಾರ್ಯಾಚರಣೆ ನಿಲ್ಲಿಸಬಾರದು ಎಂದು ಹೇಳಿದ್ದಾರೆ. ಈ ಬಗ್ಗೆ ಪಿಣರಾಯಿ ವಿಜಯನ್, ತನ್ನ ಟ್ವಿಟರ್ ಖಾತೆಯಲ್ಲೂ ಬರೆದುಕೊಂಡಿದ್ದಾರೆ. ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಕೇರಳದ ಕೋಜಿಕ್ಕೋಡ್ ಮೂಲದ ಅರ್ಜುನ್ (31) ಚಲಾಯಿಸುತ್ತಿದ್ದ ಮರದ ದಿಮ್ಮಿಗಳನ್ನು ಹೊತ್ತಿದ್ದ ಲಾರಿ ನಾಪತ್ತೆಯಾಗಿತ್ತು. ಆ ಲಾರಿ ಗಂಗಾವಳಿ ನದಿಯ ಆಳದಲ್ಲಿ ಸಿಲುಕಿಕೊಂಡಿದೆ ಎನ್ನಲಾಗುತ್ತಿದ್ದು, ಕೇರಳದ ಮಲೆಯಾಳಂ ಚಾನೆಲ್ಗಳು ಅರ್ಜುನ್ ಪತ್ತೆಗಾಗಿ ನಿರಂತರ ಅಭಿಯಾನ ನಡೆಸುತ್ತಿರುವುದು ದೇಶದ ಗಮನ ಸೆಳೆಯುವಂತೆ ಮಾಡಿದೆ.
The Karnataka government will resume the rescue efforts to find three individuals -- including Kozhikode native Arjun -- who went missing in a massive landslide in Ankola once the water level in Ankola once the water level in the Gangavali River decreases, said Karwar MLA Satish Krishna Sail.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm