ಬ್ರೇಕಿಂಗ್ ನ್ಯೂಸ್
29-07-24 12:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29: ಬಿಬಿಎಂಪಿ ಕಸದ ಲಾರಿ ಹರಿದು ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕೆ.ಆರ್.ಸರ್ಕಲ್ ಬಳಿ ನಡೆಯಿತು. ಮೃತರನ್ನು ಬಾಣಸವಾಡಿ ನಿವಾಸಿ ಪ್ರಶಾಂತ್ (25) ಹಾಗೂ ಆಂಧ್ರಪ್ರದೇಶ ಮೂಲದ ಶಿಲ್ಪಾ (27) ಎಂದು ಗುರುತಿಸಲಾಗಿದೆ. ಐಟಿಪಿಎಲ್ನ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಹಾಗೂ ಶಿಲ್ಪಾ ನಿನ್ನೆ ಊಟಕ್ಕೆಂದು ಹೊರಗಡೆ ಬಂದಿದ್ದಾಗ ಅವಘಡ ಸಂಭವಿಸಿದೆ.
ಅಪಘಾತ ನಡೆದಿದ್ದು ಹೇಗೆ?:
ರಾತ್ರಿ 8:45ರ ಸುಮಾರಿಗೆ ಮೆಜೆಸ್ಟಿಕ್ನಿಂದ ಕೆ.ಆರ್.ವೃತ್ತದ ಕಡೆ ಬೈಕ್ನಲ್ಲಿ ಬರುತ್ತಿದ್ದಾಗ ಸಿಐಡಿ ಜಂಕ್ಷನ್ ಮೂಲಕ ಸಂಪರ್ಕ ಕಲ್ಪಿಸುವ ರಸ್ತೆಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಲಾರಿ ಇಬ್ಬರ ಮೈಮೇಲೂ ಹರಿದಿದೆ. ಗಾಯಾಳುಗಳನ್ನು ಸಮೀಪದ ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆಯೇ ಇಬ್ಬರೂ ಮೃತಪಟ್ಟಿದ್ದಾರೆ
ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹಲಸೂರು ಗೇಟ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಸದ ಲಾರಿಗೆ ಟೆಕ್ಕಿಗಳು ಬಲಿ:
ಪ್ರಶಾಂತ್ ಮತ್ತು ಶಿಲ್ಪಾ ಟೆಕ್ಕಿಗಳಾಗಿದ್ದು, ಟಿಸಿಎಸ್ನಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಜೆ ಹಿನ್ನೆಲೆಯಲ್ಲಿ ಊಟಕ್ಕೆಂದು ಹೊರಗಡೆ ಬಂದಿದ್ದರು. ಈ ವೇಳೆ ಯಮನಂತೆ ಕಸದ ಲಾರಿ ಅಡ್ಡ ಬಂದಿದೆ. ಮೃತರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಬಿಬಿಎಂಪಿ ಕಸದ ಲಾರಿ ಚಾಲಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.
ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ:
ಬಿಬಿಎಂಪಿ ಕಸದ ಲಾರಿ ಅಪಘಾತದಲ್ಲಿ ನಿನ್ನೆ ರಾತ್ರಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಬಿಬಿಎಂಪಿ ಮೃತರ ಕುಟುಂಬಗಳಿಗೆ ನೆರವು ಕೊಡಲಿದೆ. ಇದು ದುರಾದೃಷ್ಟಕರ ಘಟನೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
Two persons on a two-wheeler were killed when a BBMP garbage truck ran over them near K.R. Circle on Sunday night. The deceased have been identified as Prashanth (25), a resident of Banaswadi and Shilpa (27), a native of Andhra Pradesh.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm