ಬ್ರೇಕಿಂಗ್ ನ್ಯೂಸ್
31-07-24 09:57 pm HK News Desk ಕರ್ನಾಟಕ
ಹಾಸನ, ಜುಲೈ.31: ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ಸಂಜೆ ಮತ್ತೆ ಗುಡ್ಡ ಕುಸಿತವಾಗಿದ್ದು ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿಕೊಂಡಿದೆ. ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಬಳಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.
ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿದ್ದು ಅದರ ಚಾಲಕರು ಹೊರಬರಲು ಪರದಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಮೂವರು ಚಾಲಕರನ್ನು ರಕ್ಷಿಸಿದ್ದಾರೆ. ಇದೇ ವೇಳೆ, ಸಕಲೇಶಪುರದ ದೊಡ್ಡತಪ್ಲು ಬಳಿ ರೈಲ್ವೆ ಹಳಿಯ ಮೇಲೂ ಗುಡ್ಡ ಕುಸಿದಿದ್ದು ಪೂರ್ತಿ ಸಂಪರ್ಕ ಕಡಿತಗೊಂಡಿದೆ. ಟ್ಯಾಂಕರ್ ಒಂದು ರಸ್ತೆಯಿಂದ ಪಲ್ಟಿಯಾಗಿದ್ದು ರೈಲು ಹಳಿಯತ್ತ ಬೀಳುವ ಹಂತದಲ್ಲಿ ನಿಂತುಬಿಟ್ಟಿದೆ.


ಈಗಾಗಲೇ ಎಡಕುಮೇರಿ ಬಳಿ ಗುಡ್ಡ ಕುಸಿತದಿಂದ ಸಕಲೇಶಪುರ- ಮಂಗಳೂರು ರೈಲ್ವೆ ಮಾರ್ಗ ಬಂದ್ ಆಗಿದ್ದು ತ್ವರಿತಗತಿಯಲ್ಲಿ ಅಲ್ಲಿ ಕಾಮಗಾರಿ ನಡೆಯುತ್ತಿತ್ತು. ಇದೀಗ ದೊಡ್ಡತಪ್ಲು ಬಳಿ ರೈಲ್ವೇ ಹಳಿಯ ಮೇಲೆ ಮಣ್ಣು ಕುಸಿತಗೊಂಡಿದ್ದು ದುರಸ್ತಿ ಮಾಡಲು ಸಂಕಷ್ಟ ಎದುರಾಗಿದೆ. ಎಡಕುಮೇರಿ ಬಳಿಗೆ ಸಕಲೇಶಪುರದಿಂದಲೇ ಪ್ರತಿನಿತ್ಯ ಕಾರ್ಮಿಕರು ಹಾಗೂ ತಿಂಡಿ, ಊಟ ಇನ್ನಿತರ ಸಾಮಾಗ್ರಿಗಳನ್ನು ಗೂಡ್ಸ್ ರೈಲಿನಲ್ಲಿ ಸಾಗಿಸುತ್ತಿದ್ದರು. ಇದೀಗ ಮಣ್ಣು ಕುಸಿದಿರುವುದರಿಂದ ರಸ್ತೆ ದುರಸ್ತಿಗೆ ತೆರಳುವುದಕ್ಕೂ ಸಕಲೇಶಪುರ ರೈಲು ಮಾರ್ಗದಿಂದ ಸಂಪರ್ಕ ಕಟ್ ಆಗಿದೆ.
Heavy rain in Mangalore cases Landslide again at Shiradi Ghat, two container trucks under soil. The incident took place at Doddataplu in Sakleshpur taluk on Wednesday evening, burying several vehicles under the debris.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm