ಬ್ರೇಕಿಂಗ್ ನ್ಯೂಸ್
31-07-24 09:57 pm HK News Desk ಕರ್ನಾಟಕ
ಹಾಸನ, ಜುಲೈ.31: ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ಸಂಜೆ ಮತ್ತೆ ಗುಡ್ಡ ಕುಸಿತವಾಗಿದ್ದು ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿಕೊಂಡಿದೆ. ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಬಳಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.
ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿದ್ದು ಅದರ ಚಾಲಕರು ಹೊರಬರಲು ಪರದಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಮೂವರು ಚಾಲಕರನ್ನು ರಕ್ಷಿಸಿದ್ದಾರೆ. ಇದೇ ವೇಳೆ, ಸಕಲೇಶಪುರದ ದೊಡ್ಡತಪ್ಲು ಬಳಿ ರೈಲ್ವೆ ಹಳಿಯ ಮೇಲೂ ಗುಡ್ಡ ಕುಸಿದಿದ್ದು ಪೂರ್ತಿ ಸಂಪರ್ಕ ಕಡಿತಗೊಂಡಿದೆ. ಟ್ಯಾಂಕರ್ ಒಂದು ರಸ್ತೆಯಿಂದ ಪಲ್ಟಿಯಾಗಿದ್ದು ರೈಲು ಹಳಿಯತ್ತ ಬೀಳುವ ಹಂತದಲ್ಲಿ ನಿಂತುಬಿಟ್ಟಿದೆ.


ಈಗಾಗಲೇ ಎಡಕುಮೇರಿ ಬಳಿ ಗುಡ್ಡ ಕುಸಿತದಿಂದ ಸಕಲೇಶಪುರ- ಮಂಗಳೂರು ರೈಲ್ವೆ ಮಾರ್ಗ ಬಂದ್ ಆಗಿದ್ದು ತ್ವರಿತಗತಿಯಲ್ಲಿ ಅಲ್ಲಿ ಕಾಮಗಾರಿ ನಡೆಯುತ್ತಿತ್ತು. ಇದೀಗ ದೊಡ್ಡತಪ್ಲು ಬಳಿ ರೈಲ್ವೇ ಹಳಿಯ ಮೇಲೆ ಮಣ್ಣು ಕುಸಿತಗೊಂಡಿದ್ದು ದುರಸ್ತಿ ಮಾಡಲು ಸಂಕಷ್ಟ ಎದುರಾಗಿದೆ. ಎಡಕುಮೇರಿ ಬಳಿಗೆ ಸಕಲೇಶಪುರದಿಂದಲೇ ಪ್ರತಿನಿತ್ಯ ಕಾರ್ಮಿಕರು ಹಾಗೂ ತಿಂಡಿ, ಊಟ ಇನ್ನಿತರ ಸಾಮಾಗ್ರಿಗಳನ್ನು ಗೂಡ್ಸ್ ರೈಲಿನಲ್ಲಿ ಸಾಗಿಸುತ್ತಿದ್ದರು. ಇದೀಗ ಮಣ್ಣು ಕುಸಿದಿರುವುದರಿಂದ ರಸ್ತೆ ದುರಸ್ತಿಗೆ ತೆರಳುವುದಕ್ಕೂ ಸಕಲೇಶಪುರ ರೈಲು ಮಾರ್ಗದಿಂದ ಸಂಪರ್ಕ ಕಟ್ ಆಗಿದೆ.
Heavy rain in Mangalore cases Landslide again at Shiradi Ghat, two container trucks under soil. The incident took place at Doddataplu in Sakleshpur taluk on Wednesday evening, burying several vehicles under the debris.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm