ಬ್ರೇಕಿಂಗ್ ನ್ಯೂಸ್
01-08-24 10:12 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.1: ಯಾವುದೇ ಅಪರಾಧ ಪ್ರಕರಣದಲ್ಲಿ ಸಂಬಂಧಪಟ್ಟ ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆಸಿಕೊಳ್ಳುವುದಕ್ಕೂ ಮುನ್ನ ಕ್ರೈಂ ಸಂಖ್ಯೆ, ಎಫ್ಐಆರ್ ಪ್ರತಿ, ಅಪರಾಧದ ಬಗ್ಗೆ ಮಾಹಿತಿ ಮತ್ತು ದೂರಿನ ಸಂಕ್ಷಿಪ್ತ ರೂಪವನ್ನು ಒಳಗೊಂಡ ನೋಟೀಸ್ ಅನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಕರ್ನಾಟಕ ಹೈಕೋರ್ಟ್, ರಾಜ್ಯ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ.
ಅಲ್ಲದೆ, ಈ ಕುರಿತು ಸಾರ್ವಜನಿಕರ ಅವಗಾಹನೆಗಾಗಿ ರಾಜ್ಯ ಗೃಹ ಕಾರ್ಯದರ್ಶಿ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕು ಎಂದು ಆದೇಶಿಸಿದೆ. ಅಮೃತಹಳ್ಳಿ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರು ವಾಟ್ಸಪ್ ಮೂಲಕ, ''ನೀವು ಠಾಣೆಗೆ ಹಾಜರಾಗಬೇಕೆಂದು'' ಕಳುಹಿಸಿದ್ದ ಸಂದೇಶವನ್ನು ಪ್ರಶ್ನಿಸಿ ಪತ್ರಕರ್ತ ಟಿ.ಆರ್. ಶಿವಪ್ರಸಾದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ -2023ರ ಕಲಂ 35ರ ಅನುಸಾರ ಆರೋಪಿಗೆ ಚೆಕ್ಲಿಸ್ಟ್ ಒದಗಿಸದೆ ಹೋದಲ್ಲಿ ಅಂತಹ ಆರೋಪಿಯು ಠಾಣಾಧಿಕಾರಿ ಮುಂದೆ ಹಾಜರಾಗುವ ಅವಶ್ಯಕತೆ ಇಲ್ಲ. ಅಂತೆಯೇ, ಪೊಲೀಸರು ಇಂತಹ ಆರೋಪಿಯ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
ಅರ್ಜಿದಾರರ ಪರ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ನನಗೆ ಹಾಗೂ ನನ್ನ ಕುಟುಂಬ ಸದಸ್ಯರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಸಂಬಂಧ ಟಿ.ವಿ. ಚಾನಲ್ನ ಸಿಇಒ ವಿಜಯ್ ಟಾಟಾ ನೀಡಿದ ದೂರಿನ ಅನುಸಾರ ಅಮೃತಹಳ್ಳಿ ಠಾಣೆಯ ಪೊಲಿಸರು ಟಿ.ಆರ್. ಶಿವಪ್ರಸಾದ್ಗೆ ವಾಟ್ಸ್ಆಪ್ ಮೂಲಕ ಸಂದೇಶ ಕಳುಹಿಸಿ, ಠಾಣೆಗೆ ಹಾಜರಾಗಬೇಕೆಂದು ಸೂಚಿಸಿದ್ದರು. ಅದನ್ನು ಪ್ರಶ್ನಿಸಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.
In a judgment aimed at checking the abuse of power by the police, the High Court of Karnataka has now made it mandatory for the State police to provide a copy of the first information report (FIR) along with the notice summoning a person to appear for questioning or investigation either as a witnesses or a suspect in connection with a criminal case.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm