ಬ್ರೇಕಿಂಗ್ ನ್ಯೂಸ್
02-08-24 10:43 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 2: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡದೆ ಬೇರೆ ದಾರಿಯಿಲ್ಲ. ಕಾನೂನು ಪ್ರಕಾರ ಅನುಮತಿ ಕೊಡಲೇಬೇಕಾಗುತ್ತದೆ ಎಂದು ದೂರುದಾರ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಹೇಳಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ದೂರಿನಲ್ಲಿ ಏನೂ ಇಲ್ಲ ಎಂದಾದರೆ ಕರ್ನಾಟಕ ಸರ್ಕಾರ ಮೂರು ಗಂಟೆಗಳ ಕಾಲ ಸಚಿವ ಸಂಪುಟ ಸಭೆ ನಡೆಸಿದ್ದು ಯಾಕೆ? 10 ರಿಂದ 12 ಸಂಪುಟ ಸಚಿವರು ಸುದ್ದಿಗೋಷ್ಠಿ ನಡೆಸಿದ್ದು ಏಕೆ? ನನ್ನ ದೂರಿನಲ್ಲಿ ಯಾವುದೇ ವಿಷಯ ಇಲ್ಲದಿದ್ದರೆ, ಈ ರೀತಿಯ ಗೊಂದಲಕಾರಿ ನಡೆಯನ್ನು ಏಕೆ ನೋಡುತ್ತಿದ್ದೇವೆ? ಎಂದು ಪ್ರಶ್ನಿಸಿದರು.
ನೋಟಿಸ್ ಹಿಂಪಡೆಯಲು ಮತ್ತು ದೂರನ್ನು ತಿರಸ್ಕರಿಸುವಂತೆ ಸರ್ಕಾರ ರಾಜ್ಯಪಾಲರಿಗೆ ಸಲಹೆ ನೀಡಿದೆ. ಆದರೆ ಅವರ ಸಲಹೆಗೆ ರಾಜ್ಯಪಾಲರು ಬದ್ಧರಾಗುತ್ತಾರೆಯೇ? ಎಂದು ಪ್ರಶ್ನಿಸಿದ ಅಬ್ರಹಾಂ, ರಾಜ್ಯಪಾಲರು ಕಾಯ್ದೆಗೆ ಬದ್ಧರಾಗಿರುತ್ತಾರೆ. ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದಾಗ ರಾಜ್ಯಪಾಲರು ಯಾರ ವಿರುದ್ಧ ಆರೋಪ ಮಾಡಲಾಗುತ್ತಿದೆಯೋ ಆ ವ್ಯಕ್ತಿಗೆ ನೋಟಿಸ್ ಮತ್ತು ಅವಕಾಶವನ್ನು ನೀಡಬೇಕು. ನಂತರ ಪ್ರಾಸಿಕ್ಯೂಷನ್ಗೆ ಅನುಮತಿ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಭ್ರಷ್ಟಾಚಾರ ತಡೆ ಕಾಯ್ದೆ ಸ್ಪಷ್ಟವಾಗಿ ಹೇಳುತ್ತದೆ ಎಂದು ಹೇಳಿದರು.
"ಇದು ಕಾನೂನು ರೀತ್ಯ ಸ್ಪಷ್ಟ ಪ್ರಕರಣವೆಂದು ರಾಜ್ಯಪಾಲರಿಗೆ ಮನವರಿಕೆಯಾಗಿರುವುದರಿಂದ ಅನುಮತಿ ನೀಡಲಿದ್ದಾರೆ. ಪ್ರಕರಣ ಸರಳವಾಗಿದೆ, ಕೃಷಿ ಭೂಮಿ ಇಲ್ಲದಿರುವಾಗ, ಕೃಷಿ ಭೂಮಿಯನ್ನು ಹೇಗೆ ಖರೀದಿಸಿದ್ದೀರಿ? ಅದು ಹೇಗೆ ನಿಮ್ಮ ಭೂಮಿಯಾಯಿತು? ಆ ಭೂಮಿ ಬೇರೊಬ್ಬರಿಗೆ ಸೇರಿರುವುದರಿಂದ ನೀವು ಅದರ ಮೇಲೆ ಹಕ್ಕು ಚಲಾಯಿಸಲು ಸಾಧ್ಯವಿಲ್ಲ. ಆ ಜಮೀನಿನಲ್ಲಿ ನಿವೇಶನಗಳು ಬೇರೆಯವರ ಹೆಸರಿನಲ್ಲಿವೆ ಎಂದು ಮುಖ್ಯಮಂತ್ರಿ ಹೆಸರು ಪ್ರಸ್ತಾಪಿಸದೇ ಅಬ್ರಹಾಂ ಟೀಕಾ ಪ್ರಹಾರ ನಡೆಸಿದರು.
ಶುಕ್ರವಾರ ಬೆಳಗ್ಗೆ ಮಾಧ್ಯಮ ಮಂದಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆ ಮಾಡಿದಾಗ, ರಾಜ್ಯಪಾಲರ ನೋಟಿಸ್ ಬಗ್ಗೆ ಹೆದರಲ್ಲ. ಸಚಿವ ಸಂಪುಟ ಅವರಿಗೆ ಉತ್ತರ ಕೊಟ್ಟಿದೆ. ನನಗೇನೂ ಹೆದರುವ ಅವಶ್ಯಕತೆ ಇಲ್ಲ. ಅಶೋಕ್ ಹೆದರಿರಬಹುದು ಎಂದಿದ್ದಾರೆ.
TJ Abraham, the petitioner who sought permission for prosecution of Karnataka Chief Minister Siddaramaiah from the Governor of Karnataka, stated on Friday that Thaawar Chand Gehlot has no choice but to grant sanction.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm