ಬ್ರೇಕಿಂಗ್ ನ್ಯೂಸ್
03-08-24 06:48 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.3: ಕೇರಳದ ವಯನಾಡು ಭೂಕುಸಿತ ಬಳಿಕ ಎಚ್ಚೆತ್ತುಕೊಂಡಿರುವ ಕೇಂದ್ರ ಸರಕಾರ, ಪಶ್ಚಿಮ ಘಟ್ಟದ 57 ಸಾವಿರ ಚದರ ಕಿಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಿದೆ.
ಜುಲೈ 31 ರಂದು ಈ ಸಂಬಂಧ ಕರಡು ಅಧಿಸೂಚನೆ ಹೊರಡಿಸಿದ್ದು ಇದು ಕಳೆದ ಒಂದು ದಶಕದಲ್ಲಿ ಹೊರಡಿಸುತ್ತಿರುವ 6ನೇ ಕರಡು ಅಧಿಸೂಚನೆಯಾಗಿದೆ. ಇದರಲ್ಲಿ ಪಶ್ಚಿಮಘಟ್ಟದ ಶೇ. 36ರಷ್ಟು ಪ್ರದೇಶ ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆ ಮಾಡಿದೆ. ಭೂಕುಸಿತ ಸಂಭವಿಸಿರುವ ಕೇರಳದ ವಯನಾಡು ಜಿಲ್ಲೆಯ 13 ಹಳ್ಳಿಗಳನ್ನು ಒಳಗೊಂಡಂತೆ ರಾಜ್ಯ ವ್ಯಾಪ್ತಿಯ 10 ಸಾವಿರ ಚದರ ಕಿಮೀ ಪಶ್ಚಿಮಘಟ್ಟ ಪ್ರದೇಶ ಪರಿಸರ ಸೂಕ್ಷ್ಮ ವಲಯದಲ್ಲಿದೆ ಎಂದು ಕರಡು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕರ್ನಾಟಕದ 20,668 ಚದರ ಕಿ.ಮೀ. ಪ್ರದೇಶವನ್ನು “ಪರಿಸರ ಸೂಕ್ಷ್ಮ ವಲಯ’ (ಇಎಸ್ಎ) ಎಂದು ಘೋಷಿಸಲಾಗಿದೆ.

ಇತ್ತೀಚೆಗಷ್ಟೇ ಭೀಕರ ಭೂಕುಸಿತಕ್ಕೆ ತುತ್ತಾಗಿರುವ ಕೇರಳದ ವಯನಾಡಿನ 13 ಹಳ್ಳಿಗಳು ಹಾಗೂ 6 ರಾಜ್ಯಗಳ ಘಟ್ಟ ಪ್ರದೇಶಗಳು ಅಧಿಸೂಚನೆಯಲ್ಲಿ ಸೇರಿವೆ. ಈ ಅಧಿಸೂಚನೆ ಹೊರಡಿಸಿದ 60 ದಿನಗಳ ಒಳಗಾಗಿ ಸಲಹೆಗಳು ಮತ್ತು ತಕರಾರುಗಳನ್ನು ಸಲ್ಲಿಸಬಹುದಾಗಿದೆ. ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದ ಬೆನ್ನಲ್ಲೇ ಕೇಂದ್ರ ಸರಕಾರ ಜು.31ರಂದು ಈ ಅಧಿಸೂಚನೆ ಹೊರಡಿಸಿದೆ.
ಪರಿಸರ ಸೂಕ್ಷ್ಮ ವಲಯದಲ್ಲಿ ಕಲ್ಲು ಕೋರೆ, ಗಣಿಗಾರಿಕೆ, ಮರಳುಗಾರಿಕೆ ಪೂರ್ಣ ನಿಷೇಧ ಇರಲಿದೆ. ಈಗಾಗಲೇ ಇರುವ ಗಣಿಗಾರಿಕೆ 5 ವರ್ಷಗಳಲ್ಲಿ ಸ್ಥಗಿತವಾಗಬೇಕು. ಹೊಸ ಉಷ್ಣ ಸ್ಥಾವರ ನಿರ್ಮಾಣ ಇಲ್ಲ. ಈಗಿರುವ ಉಷ್ಣ ಸ್ಥಾವರಗಳಿಗೆ ಅಡ್ಡಿ ಇಲ್ಲ, ಆದರೆ ವಿಸ್ತರಣೆ ಮಾಡುವಂತಿಲ್ಲ. ಬೃಹತ್ ನಿರ್ಮಾಣ ಯೋಜನೆ, ಟೌನ್ಶಿಪ್ ನಿಷೇಧ. ಹಾಲಿ ನಿರ್ಮಾಣಗಳ ದುರಸ್ತಿ, ನವೀಕರಣಕ್ಕೆ ಅಡ್ಡಿ ಇಲ್ಲ ಎನ್ನಲಾಗುತ್ತಿದೆ.
The government has issued a draft notification to declare over 56,800 square kilometres of the Western Ghats across six states, including 13 villages in Kerala’s landslide-hit Wayanad, Ecologically Sensitive Area (ESA). The development comes amid massive landslides wreaking havoc in Wayanad, leading to the deaths of over 300 people.
02-01-26 04:13 pm
HK News Desk
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm