ಬ್ರೇಕಿಂಗ್ ನ್ಯೂಸ್
03-08-24 07:38 pm HK News Desk ಕರ್ನಾಟಕ
ಸಕಲೇಶಪುರ, ಆಗಸ್ಟ್.3: ಬೆಂಗಳೂರು ಮತ್ತು ಕರಾವಳಿ ನಗರಿ ಮಂಗಳೂರು ನಡುವೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಶಿರಾಡಿ ಘಾಟ್ ಭೂಕುಸಿತ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿದ್ದಾರೆ. ಮೈಸೂರಿನಿಂದ ರಸ್ತೆ ಮಾರ್ಗದಲ್ಲೇ ಬಂದ ಮುಖ್ಯಮಂತ್ರಿ ಶಿರಾಡಿ ಗುಡ್ಡ ಕುಸಿತದ ಭೀಕರತೆ ಕಂಡು ಶಾಕ್ ಆಗಿದ್ದಾರೆ. ಗುಡ್ಡ ಕಡಿಯುವಾಗ ಯಾಕೆ ಎಚ್ಚರ ವಹಿಸಿಲ್ಲ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಕಲೇಶಪುರ ಬಳಿಯ ದೊಡ್ಡ ತಪ್ಪಲು ಎಂಬಲ್ಲಿ ಮತ್ತೆ ಗುಡ್ಡ ಕುಸಿದಿದ್ದು ಇದರಿಂದಾಗಿ ಈ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ಗುಡ್ಡ ಕುಸಿತಕ್ಕೆ ಇದೇ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂ ಗೆ ವಿವರಿಸಿದರು. "ಒಟ್ಟು 45 ಕಿ.ಮೀ ನಲ್ಲಿ 35 ಕಿ.ಮೀ ಹೈವೇ ಕಾಮಗಾರಿ ಮುಗಿದಿದೆ. 10 ಕಿ.ಮೀ ಬಾಕಿ ಇದೆ. ಆದರೆ ಇಲ್ಲಿಯ ವರೆಗೂ ಎಲ್ಲಿಯೂ ರಸ್ತೆಗೆ ತಡೆಗೋಡೆ ನಿರ್ಮಿಸಿಲ್ಲ. ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಗಮನಕ್ಕೆ ತಂದರು.
ಮಣ್ಣು ಕುಸಿತದಿಂದ ರಸ್ತೆಯಲ್ಲಿ ನಿಂತಿರುವ ಮೊಣಕಾಲುದ್ದುದ ಕೆಸರಲ್ಲೇ ನಡೆದುಕೊಂಡೇ ಗುಡ್ಡ ಕುಸಿತ ಪ್ರದೇಶವನ್ನು ಪರಿಶೀಲಿಸಿದ ಮುಖ್ಯಮಂತ್ರಿ ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ SDRF ತಂಡದೊಂದಿಗೂ ಮಾಹಿತಿ ಪಡೆದರು. ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರ ಮುಂದೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟರು. ಈ ರೀತಿ ಘಾಟ್ ಪ್ರದೇಶದ ಗುಡ್ಡ ಅಗೆಯುವಾಗ ಯಾಕೆ ಮಣ್ಣಿನ ಸುರಕ್ಷತೆ ಬಗ್ಗೆ ಕ್ರಮಗಳನ್ನು ಕೈಗೊಂಡಿಲ್ಲ. ಲಂಬವಾಗಿ ಗುಡ್ಡ ಕಡಿದು ಕಡಿಮೆ ಹಣದಲ್ಲಿ ಕಾಮಗಾರಿ ಮುಗಿಸಬೇಕೆಂದು ಯೋಜನೆ ಹಾಕಿದ್ದೀರಾ.. ತಡೆಗೋಡೆ ಕಟ್ಟುತ್ತಿದ್ದರೆ ಈ ರೀತಿ ಕುಸಿತ ಆಗುತ್ತಿತ್ತಾ.. ರಸ್ತೆ ವಿಸ್ತರಣೆ ಕಾರಣಕ್ಕೆ ಘಾಟ್ ಪ್ರದೇಶವನ್ನು ಒಟ್ಟಾರೆ ಅಗೆದು ಹಾಕೋದಾ ಎಂದು ಪ್ರಶ್ನೆ ಮಾಡಿದರು. ಕೂಡಲೇ ಈ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.
Karnataka CM Siddaramaiah visits the Shiradi Ghat hill collapse site to inspects and issues instructions to the regional officer of the National Highway Authority in Hassan on Saturday August 03, 2024
02-01-26 04:13 pm
HK News Desk
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm