ಬ್ರೇಕಿಂಗ್ ನ್ಯೂಸ್
05-08-24 02:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.5: ಬೆಂಗಳೂರು ನಗರದಲ್ಲಿ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯಿಂದ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಂತೆ, ಬೆಂಗಳೂರು ನಗರದಾದ್ಯಂತ ಪ್ರತಿ ಶನಿವಾರ ಮತ್ತು ಇತರೇ ದಿನಗಳಲ್ಲಿ ಬೆಳಗ್ಗೆ, ಸಂಜೆ ಎಲ್ಲ ರೀತಿಯ ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.
ವೀಕೆಂಡಲ್ಲಿ ಟ್ರಾಫಿಕ್ ಹೆಚ್ಚಿರುವುದರಿಂದ ಪ್ರತಿ ಶನಿವಾರಗಳಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ಮತ್ತು ಸಂಜೆ 4.30 ರಿಂದ ರಾತ್ರಿ 9ರ ವರೆಗೆ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇತರ ದಿನಗಳಲ್ಲಿ ಬೆಳಗ್ಗೆ 7 ರಿಂದ ಪೂರ್ವಾಹ್ನ 11ರ ವರೆಗೆ ಮತ್ತು ಸಂಜೆ 4 ರಿಂದ ರಾತ್ರಿ 10ರ ವರೆಗಿನ ನಿರ್ಬಂಧವಿದ್ದು ಅದು ಮುಂದುವರಿಯಲಿದೆ.
ವಾರಾಂತ್ಯ ದಿನಗಳಲ್ಲಿ ಹೆಚ್ಚಿನ ದಟ್ಟಣೆ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರ ನಡುವೆ ಇರುತ್ತದೆ. ಶನಿವಾರ ಮಧ್ಯಾಹ್ನ 1 ಗಂಟೆಯಷ್ಟೊತ್ತಿಗೆ ಸಂಚಾರ ದಟ್ಟಣೆ ತೀವ್ರಗೊಳ್ಳುತ್ತದೆ. ಪೀಕ್ ಅವರ್ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2:30ರ ವರೆಗೆ ಮತ್ತು ಸಂಜೆ 5 ರಿಂದ ರಾತ್ರಿ 8:30ರ ವರೆಗೆ ಇರುತ್ತದೆ. ಹಾಗಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
ಘನ ವಾಹನಗಳ ನಿರ್ಬಂಧವು ವಾರಾಂತ್ಯದಲ್ಲಿ ನಗರ ಎದುರಿಸುವ ತೀವ್ರ ಟ್ರಾಫಿಕ್ ದಟ್ಟಣೆಯನ್ನು ಪರಿಹರಿಸುವ ಉದ್ದೇಶ ಹೊಂದಿದೆ. ಇದರಿಂದ ಸಾಮಾನ್ಯ ಪ್ರಯಾಣಿಕರಿಗೆ ಸಂಚಾರ ಸುಗಮವಾಗಲಿದೆ ಎಂದು ತಿಳಿಸಿದ್ದಾರೆ.
Bengaluru Traffic Police is taking many measures to control traffic in the city. Communicating traffic rules to motorists and pedestrians. Also implementing new initiatives. Now they have made some changes in the traffic time of heavy goods vehicle within the city.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm