ಬ್ರೇಕಿಂಗ್ ನ್ಯೂಸ್
07-08-24 12:03 pm HK News Desk ಕರ್ನಾಟಕ
ಕಾರವಾರ, ಆಗಸ್ಟ್.7: ಕಾರವಾರ ಬಳಿಯ ಕೋಡಿಬಾಗ್ ನಲ್ಲಿರುವ ಕಾಳಿ ನದಿಗೆ ಅಡ್ಡಲಾಗಿದ್ದ ಹಳೆ ಸೇತುವೆ ನಿನ್ನೆ ತಡರಾತ್ರಿ ಕುಸಿದು ಬಿದ್ದಿದ್ದು ಹೆಚ್ಚಿನ ವಾಹನಗಳು ಇಲ್ಲದೇ ಇದ್ದುದರಿಂದ ಅನಾಹುತ ತಪ್ಪಿದೆ. ಟ್ರಕ್ ಒಂದು ನೀರುಪಾಲಾಗಿದ್ದು ಚಾಲಕ ಸ್ವಲ್ಪದರಲ್ಲಿ ಬಚಾವ್ ಆಗಿದ್ದಾನೆ.
ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ 60 ವರ್ಷಗಳ ಹಿಂದೆ ಕಾಳಿ ನದಿಗೆ ನಿರ್ಮಿಸಲಾಗಿದ್ದ ಸೇತುವೆ ದುಸ್ಥಿತಿಗೆ ಒಳಗಾಗಿತ್ತು. ಹೀಗಾಗಿ ಪಕ್ಕದಲ್ಲೇ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐಆರ್ ಬಿ ಕಂಪನಿಯಿಂದ ಹೊಸ ಸೇತುವೆ ರಚಿಸಲಾಗಿತ್ತು. ಹೊಸ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿರಲಿಲ್ಲ. ನಿನ್ನೆ ತಡರಾತ್ರಿ ಟ್ರಕ್ ಒಂದು ಸಂಚರಿಸುತ್ತಿದ್ದಾಗ ಹಳೆ ಸೇತುವೆ ಕುಸಿದು ಬಿದ್ದಿದ್ದು ಟ್ರಕ್ ನದಿಗೆ ಬಿದ್ದಿದೆ. ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಟ್ರಕ್ ಚಾಲಕನನ್ನು ರಕ್ಷಿಸಿದ್ದಾರೆ. ಬಳಿಕ ನದಿಗೆ ನಿರ್ಮಿಸಿರುವ ಹೊಸ ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಲಾಗಿತ್ತು.



![]()




ತಡರಾತ್ರಿಯೇ ಎಸ್ಪಿ ನಾರಾಯಣ್ ಮತ್ತು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅವೈಜ್ಞಾನಿಕ ಕಾಮಗಾರಿಯಿಂದ ಕಳೆದ 15 ದಿನಗಳ ಹಿಂದಷ್ಟೆ ಶಿರೂರು ಗುಡ್ಡ ಕುಸಿತ ಆಗಿತ್ತು. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರು. ಈಗ ಅದೇ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೋವಾ- ಕಾರವಾರ ಸಂಪರ್ಕಿಸುವ ಸೇತುವೆ ಕುಸಿದು ಬಿದ್ದಿರುವುದರಿಂದ ಜಿಲ್ಲಾಧಿಕಾರಿ, ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಐಆರ್ ಬಿ ಕಂಪನಿ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಹಿನ್ನೆಲೆ ಐ ಆರ್ ಬಿ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಮೇಲೆ ಕೇಸ್ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಆಸುಪಾಸು ಒಂದು ಕಿಮೀ ಉದ್ದದ ದೊಡ್ಡ ಸೇತುವೆ ಇದಾಗಿದ್ದು ಕಾರವಾರದಿಂದ ಗೋವಾ ತಲುಪಲು ಇದೇ ಹೆದ್ದಾರಿಯಲ್ಲಿ ಸಾಗಬೇಕಿದೆ.
ಇದೇ ವೇಳೆ, ಐ ಆರ್ ಬಿ ಕಂಪನಿಯಿಂದ ನಿರ್ಮಾಣಗೊಂಡಿರುವ ಹೊಸ ಸೇತುವೆಯ ಗುಣಮಟ್ಟ ಪರೀಕ್ಷೆ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಕುಸಿದ ಸೇತುವೆಯ ಪಕ್ಕದಲ್ಲೇ ಹೊಸ ಸೇತುವೆಯಿದ್ದು ಗುಣಮಟ್ಟ ಪರೀಕ್ಷೆ ಬಳಿಕವೇ ಸಂಚಾರಕ್ಕೆ ಅನುವು ನೀಡುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಸೇತುವೆಯ ಗುಣಮಟ್ಟದ ವರದಿ ಬರುವವರೆಗೂ ಕಾರವಾರ- ಗೋವಾ ಮಧ್ಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಷೇಧಿಸಿ ಆದೇಶ ಮಾಡಿದ್ದಾರೆ. ಸದ್ಯ ಕಾರವಾರದಿಂದ ಗೋವಾ ಕಡೆ ಹೋಗುವ ಸಂಚಾರ ಬಂದ್ ಆಗಿದೆ.
ಬೆಳಗಾಗುತ್ತಿದ್ದಂತೆ ಕಾಳಿ ನದಿಯ ಹಳೆ ಸೇತುವೆ ಕುಸಿತ ವಿಷಯ ತಿಳಿದು ಜನರು ತಂಡೋಪತಂಡವಾಗಿ ನೋಡಲು ಆಗಮಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದು ಹೊಸ ಸೇತುವೆ ಮೇಲೆ ನಿಂತು ಕುಸಿದ ಸೇತುವೆ ನೋಡುತ್ತಿದ್ದಾರೆ. ಜನರನ್ನ ಚದುರಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು ಬಡಕಲಾಗಿದ್ದ ಸೇತುವೆ ಬಿದ್ದಿರುವುದು ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.
A 37-year-old truck driver from Tamil Nadu was rescued after his vehicle fell into Kali River following the collapse of a bridge at Karwar in Karnataka's Uttara Kannada district in the early hours of Wednesday.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm