ಬ್ರೇಕಿಂಗ್ ನ್ಯೂಸ್
08-08-24 11:20 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 8: ತೀರ್ಥಹಳ್ಳಿಯಲ್ಲಿ ಅಕ್ರಮ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್ಎಫ್ಒ) ಲೋಕೇಶ್ ಅವರನ್ನು ಎರಡೇ ದಿನಗಳಲ್ಲಿ ವರ್ಗಾವಣೆ ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ತುಂಗಾ ನದಿ ದಡದಲ್ಲಿ ವಿಹಂಗಮ ಹಾಲಿಡೇ ರೆಸಾರ್ಟ್ ಬಫರ್ ಝೋನ್ ಒಳಗೆ ಕಾರ್ಯಾಚರಿಸುತ್ತಿದ್ದು, ಕೃಷಿ ಚಟುವಟಿಕೆ, ರೆಸಾರ್ಟ್ ಜೊತೆಗೆ ವಾಣಿಜ್ಯ ಚಟುವಟಿಕೆಗಳೂ ನಡೆಯುತ್ತಿವೆ. ಇದಕ್ಕೆ ಅನುಮತಿ ನೀಡಿದವರು ಯಾರೆಂದು ಹೋರಾಟಗಾರ ಎಚ್.ಎಂ ವೆಂಕಟೇಶ್ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಿವಮೊಗ್ಗ ಜಿಲ್ಲಾಡಳಿತವನ್ನು ಪ್ರಶ್ನಿಸಿ, ಪತ್ರ ಬರೆದಿದ್ದರು.
ಜಿಲ್ಲಾಡಳಿತದಿಂದ ಪತ್ರ ಬಂದಿದ್ದರಿಂದ ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್ ಸ್ಥಳಕ್ಕೆ ತೆರಳಿ, ಅರಣ್ಯ ಪ್ರದೇಶ ಒತ್ತುವರಿ ಮಾಡಿ ರೆಸಾರ್ಟ್ ನೆಪದಲ್ಲಿ ಅರಣ್ಯ ಕಾಯ್ದೆ ಉಲ್ಲಂಘಿಸಿದ್ದಾರೆ. ಅದನ್ನು ಕೂಡಲೇ ತೆರವುಗೊಳಿಸಲು ವರದಿ ನೀಡಿದ್ದರು. ವರದಿ ನೀಡಿದ ಎರಡೇ ದಿನದಲ್ಲಿ ಡಾ. ಲೋಕೇಶ್ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಲೋಕೇಶ್ ಅವರು ತೀರ್ಥಹಳ್ಳಿಗೆ ಬಂದು, ಕೇವಲ ಒಂದು ವರ್ಷ 9 ತಿಂಗಳು ಮಾತ್ರ ಆಗಿದ್ದು, 2 ವರ್ಷ ಪೂರ್ಣ ಆಗಿಲ್ಲ. ಅದಕ್ಕೂ ಮೊದಲೇ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಈ ವರ್ಗಾವಣೆಗೆ ತಡೆ ನೀಡುವಂತೆ ಲೋಕೇಶ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ವಿಹಂಗಮ ರೆಸಾರ್ಟ್ ವಿರುದ್ಧ ಬಂದಿದ್ದ ದೂರನ್ನು ಆಧರಿಸಿ, ವರದಿ ನೀಡಿದ್ದೇನೆ. ಎಫ್ ಐ ಆರ್ ಮಾಡಿ ಕ್ರಮ ಜರುಗಿಸಲು ತಿಳಿಸಿದ್ದೇನೆ. ವರದಿ ಕೊಟ್ಟ ಮಾರನೇ ದಿನಕ್ಕೆ ವರ್ಗಾವಣೆ ಆದೇಶ ಬಂದಿದೆ. ಹಾಗಾಗಿ, ನನ್ನ ಮೇಲೆ ವರ್ಗಾವಣೆ ಅಸ್ತ್ರ ಪ್ರಯೋಗ ಆಗಿರಬಹುದು ಎಂದು ಡಾ.ಲೋಕೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.
Shivamogga forest officer transferred for vacating resort in forest area in Shivamogga
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am