ಬ್ರೇಕಿಂಗ್ ನ್ಯೂಸ್
08-08-24 11:20 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 8: ತೀರ್ಥಹಳ್ಳಿಯಲ್ಲಿ ಅಕ್ರಮ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್ಎಫ್ಒ) ಲೋಕೇಶ್ ಅವರನ್ನು ಎರಡೇ ದಿನಗಳಲ್ಲಿ ವರ್ಗಾವಣೆ ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ತುಂಗಾ ನದಿ ದಡದಲ್ಲಿ ವಿಹಂಗಮ ಹಾಲಿಡೇ ರೆಸಾರ್ಟ್ ಬಫರ್ ಝೋನ್ ಒಳಗೆ ಕಾರ್ಯಾಚರಿಸುತ್ತಿದ್ದು, ಕೃಷಿ ಚಟುವಟಿಕೆ, ರೆಸಾರ್ಟ್ ಜೊತೆಗೆ ವಾಣಿಜ್ಯ ಚಟುವಟಿಕೆಗಳೂ ನಡೆಯುತ್ತಿವೆ. ಇದಕ್ಕೆ ಅನುಮತಿ ನೀಡಿದವರು ಯಾರೆಂದು ಹೋರಾಟಗಾರ ಎಚ್.ಎಂ ವೆಂಕಟೇಶ್ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಿವಮೊಗ್ಗ ಜಿಲ್ಲಾಡಳಿತವನ್ನು ಪ್ರಶ್ನಿಸಿ, ಪತ್ರ ಬರೆದಿದ್ದರು.
ಜಿಲ್ಲಾಡಳಿತದಿಂದ ಪತ್ರ ಬಂದಿದ್ದರಿಂದ ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್ ಸ್ಥಳಕ್ಕೆ ತೆರಳಿ, ಅರಣ್ಯ ಪ್ರದೇಶ ಒತ್ತುವರಿ ಮಾಡಿ ರೆಸಾರ್ಟ್ ನೆಪದಲ್ಲಿ ಅರಣ್ಯ ಕಾಯ್ದೆ ಉಲ್ಲಂಘಿಸಿದ್ದಾರೆ. ಅದನ್ನು ಕೂಡಲೇ ತೆರವುಗೊಳಿಸಲು ವರದಿ ನೀಡಿದ್ದರು. ವರದಿ ನೀಡಿದ ಎರಡೇ ದಿನದಲ್ಲಿ ಡಾ. ಲೋಕೇಶ್ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಲೋಕೇಶ್ ಅವರು ತೀರ್ಥಹಳ್ಳಿಗೆ ಬಂದು, ಕೇವಲ ಒಂದು ವರ್ಷ 9 ತಿಂಗಳು ಮಾತ್ರ ಆಗಿದ್ದು, 2 ವರ್ಷ ಪೂರ್ಣ ಆಗಿಲ್ಲ. ಅದಕ್ಕೂ ಮೊದಲೇ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಈ ವರ್ಗಾವಣೆಗೆ ತಡೆ ನೀಡುವಂತೆ ಲೋಕೇಶ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ವಿಹಂಗಮ ರೆಸಾರ್ಟ್ ವಿರುದ್ಧ ಬಂದಿದ್ದ ದೂರನ್ನು ಆಧರಿಸಿ, ವರದಿ ನೀಡಿದ್ದೇನೆ. ಎಫ್ ಐ ಆರ್ ಮಾಡಿ ಕ್ರಮ ಜರುಗಿಸಲು ತಿಳಿಸಿದ್ದೇನೆ. ವರದಿ ಕೊಟ್ಟ ಮಾರನೇ ದಿನಕ್ಕೆ ವರ್ಗಾವಣೆ ಆದೇಶ ಬಂದಿದೆ. ಹಾಗಾಗಿ, ನನ್ನ ಮೇಲೆ ವರ್ಗಾವಣೆ ಅಸ್ತ್ರ ಪ್ರಯೋಗ ಆಗಿರಬಹುದು ಎಂದು ಡಾ.ಲೋಕೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.
Shivamogga forest officer transferred for vacating resort in forest area in Shivamogga
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm