ಬ್ರೇಕಿಂಗ್ ನ್ಯೂಸ್
08-08-24 11:20 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 8: ತೀರ್ಥಹಳ್ಳಿಯಲ್ಲಿ ಅಕ್ರಮ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್ಎಫ್ಒ) ಲೋಕೇಶ್ ಅವರನ್ನು ಎರಡೇ ದಿನಗಳಲ್ಲಿ ವರ್ಗಾವಣೆ ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ತುಂಗಾ ನದಿ ದಡದಲ್ಲಿ ವಿಹಂಗಮ ಹಾಲಿಡೇ ರೆಸಾರ್ಟ್ ಬಫರ್ ಝೋನ್ ಒಳಗೆ ಕಾರ್ಯಾಚರಿಸುತ್ತಿದ್ದು, ಕೃಷಿ ಚಟುವಟಿಕೆ, ರೆಸಾರ್ಟ್ ಜೊತೆಗೆ ವಾಣಿಜ್ಯ ಚಟುವಟಿಕೆಗಳೂ ನಡೆಯುತ್ತಿವೆ. ಇದಕ್ಕೆ ಅನುಮತಿ ನೀಡಿದವರು ಯಾರೆಂದು ಹೋರಾಟಗಾರ ಎಚ್.ಎಂ ವೆಂಕಟೇಶ್ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಿವಮೊಗ್ಗ ಜಿಲ್ಲಾಡಳಿತವನ್ನು ಪ್ರಶ್ನಿಸಿ, ಪತ್ರ ಬರೆದಿದ್ದರು.
ಜಿಲ್ಲಾಡಳಿತದಿಂದ ಪತ್ರ ಬಂದಿದ್ದರಿಂದ ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್ ಸ್ಥಳಕ್ಕೆ ತೆರಳಿ, ಅರಣ್ಯ ಪ್ರದೇಶ ಒತ್ತುವರಿ ಮಾಡಿ ರೆಸಾರ್ಟ್ ನೆಪದಲ್ಲಿ ಅರಣ್ಯ ಕಾಯ್ದೆ ಉಲ್ಲಂಘಿಸಿದ್ದಾರೆ. ಅದನ್ನು ಕೂಡಲೇ ತೆರವುಗೊಳಿಸಲು ವರದಿ ನೀಡಿದ್ದರು. ವರದಿ ನೀಡಿದ ಎರಡೇ ದಿನದಲ್ಲಿ ಡಾ. ಲೋಕೇಶ್ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಲೋಕೇಶ್ ಅವರು ತೀರ್ಥಹಳ್ಳಿಗೆ ಬಂದು, ಕೇವಲ ಒಂದು ವರ್ಷ 9 ತಿಂಗಳು ಮಾತ್ರ ಆಗಿದ್ದು, 2 ವರ್ಷ ಪೂರ್ಣ ಆಗಿಲ್ಲ. ಅದಕ್ಕೂ ಮೊದಲೇ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಈ ವರ್ಗಾವಣೆಗೆ ತಡೆ ನೀಡುವಂತೆ ಲೋಕೇಶ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ವಿಹಂಗಮ ರೆಸಾರ್ಟ್ ವಿರುದ್ಧ ಬಂದಿದ್ದ ದೂರನ್ನು ಆಧರಿಸಿ, ವರದಿ ನೀಡಿದ್ದೇನೆ. ಎಫ್ ಐ ಆರ್ ಮಾಡಿ ಕ್ರಮ ಜರುಗಿಸಲು ತಿಳಿಸಿದ್ದೇನೆ. ವರದಿ ಕೊಟ್ಟ ಮಾರನೇ ದಿನಕ್ಕೆ ವರ್ಗಾವಣೆ ಆದೇಶ ಬಂದಿದೆ. ಹಾಗಾಗಿ, ನನ್ನ ಮೇಲೆ ವರ್ಗಾವಣೆ ಅಸ್ತ್ರ ಪ್ರಯೋಗ ಆಗಿರಬಹುದು ಎಂದು ಡಾ.ಲೋಕೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.
Shivamogga forest officer transferred for vacating resort in forest area in Shivamogga
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm