ಬ್ರೇಕಿಂಗ್ ನ್ಯೂಸ್
08-08-24 11:20 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 8: ತೀರ್ಥಹಳ್ಳಿಯಲ್ಲಿ ಅಕ್ರಮ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್ಎಫ್ಒ) ಲೋಕೇಶ್ ಅವರನ್ನು ಎರಡೇ ದಿನಗಳಲ್ಲಿ ವರ್ಗಾವಣೆ ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ತುಂಗಾ ನದಿ ದಡದಲ್ಲಿ ವಿಹಂಗಮ ಹಾಲಿಡೇ ರೆಸಾರ್ಟ್ ಬಫರ್ ಝೋನ್ ಒಳಗೆ ಕಾರ್ಯಾಚರಿಸುತ್ತಿದ್ದು, ಕೃಷಿ ಚಟುವಟಿಕೆ, ರೆಸಾರ್ಟ್ ಜೊತೆಗೆ ವಾಣಿಜ್ಯ ಚಟುವಟಿಕೆಗಳೂ ನಡೆಯುತ್ತಿವೆ. ಇದಕ್ಕೆ ಅನುಮತಿ ನೀಡಿದವರು ಯಾರೆಂದು ಹೋರಾಟಗಾರ ಎಚ್.ಎಂ ವೆಂಕಟೇಶ್ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಿವಮೊಗ್ಗ ಜಿಲ್ಲಾಡಳಿತವನ್ನು ಪ್ರಶ್ನಿಸಿ, ಪತ್ರ ಬರೆದಿದ್ದರು.
ಜಿಲ್ಲಾಡಳಿತದಿಂದ ಪತ್ರ ಬಂದಿದ್ದರಿಂದ ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್ ಸ್ಥಳಕ್ಕೆ ತೆರಳಿ, ಅರಣ್ಯ ಪ್ರದೇಶ ಒತ್ತುವರಿ ಮಾಡಿ ರೆಸಾರ್ಟ್ ನೆಪದಲ್ಲಿ ಅರಣ್ಯ ಕಾಯ್ದೆ ಉಲ್ಲಂಘಿಸಿದ್ದಾರೆ. ಅದನ್ನು ಕೂಡಲೇ ತೆರವುಗೊಳಿಸಲು ವರದಿ ನೀಡಿದ್ದರು. ವರದಿ ನೀಡಿದ ಎರಡೇ ದಿನದಲ್ಲಿ ಡಾ. ಲೋಕೇಶ್ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಲೋಕೇಶ್ ಅವರು ತೀರ್ಥಹಳ್ಳಿಗೆ ಬಂದು, ಕೇವಲ ಒಂದು ವರ್ಷ 9 ತಿಂಗಳು ಮಾತ್ರ ಆಗಿದ್ದು, 2 ವರ್ಷ ಪೂರ್ಣ ಆಗಿಲ್ಲ. ಅದಕ್ಕೂ ಮೊದಲೇ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಈ ವರ್ಗಾವಣೆಗೆ ತಡೆ ನೀಡುವಂತೆ ಲೋಕೇಶ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ವಿಹಂಗಮ ರೆಸಾರ್ಟ್ ವಿರುದ್ಧ ಬಂದಿದ್ದ ದೂರನ್ನು ಆಧರಿಸಿ, ವರದಿ ನೀಡಿದ್ದೇನೆ. ಎಫ್ ಐ ಆರ್ ಮಾಡಿ ಕ್ರಮ ಜರುಗಿಸಲು ತಿಳಿಸಿದ್ದೇನೆ. ವರದಿ ಕೊಟ್ಟ ಮಾರನೇ ದಿನಕ್ಕೆ ವರ್ಗಾವಣೆ ಆದೇಶ ಬಂದಿದೆ. ಹಾಗಾಗಿ, ನನ್ನ ಮೇಲೆ ವರ್ಗಾವಣೆ ಅಸ್ತ್ರ ಪ್ರಯೋಗ ಆಗಿರಬಹುದು ಎಂದು ಡಾ.ಲೋಕೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.
Shivamogga forest officer transferred for vacating resort in forest area in Shivamogga
02-01-26 01:58 pm
Bangalore Correspondent
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm