ಬ್ರೇಕಿಂಗ್ ನ್ಯೂಸ್
09-08-24 01:35 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 9: 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರನ್ ವಯನಾಡಿನಲ್ಲಿ ಭೂಕುಸಿತದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೆರವು ನೀಡಲು ಮುಂದಾಗಿದ್ದಾನೆ. ಸಂತ್ರಸ್ತರಿಗೆ 15 ಕೋಟಿ ರೂ. ದೇಣಿಗೆ ಹಾಗೂ 300 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ಗೆ ಆರೋಪಿ ಪತ್ರ ಬರೆದಿದ್ದಾನೆ.
ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿರುವ ಸುಕೇಶ್ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು ವಯನಾಡಿನ ಭೂಕುಸಿತ ದುರಂತದಿಂದ ಮನಸ್ಸಿಗೆ ತುಂಬಾ ನೋವಾಗಿದೆ. ದೇವರ ನಾಡು ಕೇರಳದ ಬಗ್ಗೆ ಅಪಾರ ಅಭಿಮಾನ ಇದೆ. ಅಲ್ಲಿನ ಜನರು ನನ್ನ ಕಷ್ಟದ ದಿನಗಳಲ್ಲಿ ಬೆಂಬಲ ನೀಡಿದ್ದಾರೆ. ದುರಂತದ ಪರಿಹಾರ ನಿಧಿಗೆ 15 ಕೋಟಿ ರೂ. ನೆರವು ನೀಡಬೇಕೆಂದಿದ್ದೇನೆ. ದಯವಿಟ್ಟು ನನ್ನ ನೆರವು ಸ್ವೀಕರಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ. ಹಣವನ್ನು ಹೊರತುಪಡಿಸಿ ಸಂತ್ರಸ್ತರಿಗೆ ತುರ್ತು ಅಗತ್ಯದ ನೆಲೆಯಲ್ಲಿ 300 ಮನೆಗಳನ್ನು ನಿರ್ಮಿಸಿಕೊಡಲು ನಿರ್ಧರಿಸಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾನೆ.
ಆರೋಪಿ ಚಂದ್ರಶೇಖರ್ ಬರೆದಿರುವ ಪತ್ರ ಎಂದು ಆತನ ಪರ ವಕೀಲ ಅನಂತ್ ಮಲಿಕ್ ಅವರು ಖಚಿತಪಡಿಸಿದ್ದಾರೆ. ಕಾನೂನುಬದ್ಧ ವ್ಯವಹಾರದ ಖಾತೆಗಳಿಂದಲೇ ಈ ಹಣ ನೀಡುವುದಾಗಿ ತಿಳಿಸಿರುವ ಸುಕೇಶ್ ಚಂದ್ರಶೇಖರ್, ರಾಜ್ಯ ಸರ್ಕಾರವು ಈ ಪ್ರಸ್ತಾಪವನ್ನು ಸ್ವೀಕರಿಸಬೇಕು ಮತ್ತು ಭೂಕುಸಿತ ದುರಂತಲ್ಲಿ ಸಂತ್ರಸ್ತರ ಕಲ್ಯಾಣ ಮತ್ತು ಪುನರ್ವಸತಿಗಾಗಿ ಈ ಹಣವನ್ನು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಸದ್ಯ ಸುಕೇಶ್ ಚಂದ್ರಶೇಖರ್ ಪತ್ರಕ್ಕೆ ಕೇರಳ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಕಳೆದ ಜುಲೈ 30ರ ತಡರಾತ್ರಿ ವಯನಾಡಿನ ಚೂರಲ್ಮಲ ಹಾಗೂ ಮುಂಡಕ್ಕೈ ಪ್ರದೇಶಗಳಲ್ಲಿ ಉಂಟಾದ ಭೂಕುಸಿತದಿಂದ ನೂರಾರು ಮಂದಿ ಮನೆ ಕಳೆದುಕೊಂಡಿದ್ದಾರೆ. 400ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಏತನ್ಮಧ್ಯೆ, ಭೂಕುಸಿತ ಪೀಡಿತ ಚೂರಲ್ಮಲ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ನಾಪತ್ತೆಯಾದವರ ಹುಡುಕಾಟ ಮುಂದುವರಿದಿದೆ. ಸೇನೆ ಮತ್ತು ನೌಕಾಪಡೆ ಸೇರಿದಂತೆ ವಿವಿಧ ಪಡೆಗಳ 1000ಕ್ಕೂ ಹೆಚ್ಚು ಸಿಬ್ಬಂದಿ, 500ಕ್ಕೂ ಹೆಚ್ಚು ಸ್ವಯಂಸೇವಕರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇದೇ ವೇಳೆ, ಕರ್ನಾಟಕ ಸರ್ಕಾರ ವಯನಾಡು ಸಂಸತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಘೋಷಣೆ ಮಾಡಿದೆ.
Alleged conman Sukesh Chandrasekhar has written a letter to Kerala Chief Minister Pinarayi Vijayan, requesting him to accept his contribution of Rs 15 crore to the Chief Minister’s Distress Relief Fund following a landslide in Wayanad district.
02-01-26 01:58 pm
Bangalore Correspondent
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm