ಬ್ರೇಕಿಂಗ್ ನ್ಯೂಸ್
17-08-24 09:36 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.17: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ ನಲ್ಲಿ ಕೇವಿಯಟ್ ಅರ್ಜಿ ದಾಖಲಾಗಿದೆ. ಹೈಕೋರ್ಟ್ ವಕೀಲ ಎಸ್.ಪಿ.ಪ್ರದೀಪ್ ಕುಮಾರ್ ಕೇವಿಯಟ್ ಅರ್ಜಿ ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯಪಾಲರು ನೀಡಿರುವ ತನಿಖೆಯ ಅನುಮತಿಯನ್ನು ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದರೆ ಆಗ ನಮ್ಮ ವಾದ ಆಲಿಸದೆ ಯಾವುದೇ ಆದೇಶ ಮಾಡಬಾರದು ಎಂದು ಅರ್ಜಿಯಲ್ಲಿ ಕೋರಿದ್ದಾರೆ.
ಮುಡಾ ಹಗರಣವನ್ನು ತನಿಖೆಗೆ ಒಳಪಡಿಸಲು ಆದೇಶಿಸಬೇಕು ಎಂದು ಕೋರಿ ಎಸ್.ಪಿ.ಪ್ರದೀಪ್ ಕುಮಾರ್ ಈಗಾಗಲೇ "ಜನಪ್ರತಿನಿಧಿಗಳ ವಿಶೇಷ ಕೋರ್ಟ್" ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಮುಡಾದಲ್ಲಿ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂಬ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ಧರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದರು.
ಕೇವಿಯಟ್ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅರ್ಜಿದಾರ ಪ್ರದೀಪ್ ಕುಮಾರ್, ‘ಕಾನೂನು ಪ್ರಕಾರ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೊರೆ ಹೋಗಬಹುದು, ಕೇವಿಯಟ್ ಇಲ್ಲದೇ ಹೋದರೆ ಅವರಿಗೆ ರಿಲೀಫ್ ಸಿಗಬಹುದು. ಹೀಗಾಗಿ, ನಾನು ಕೇವಿಯಟ್ ಸಲ್ಲಿಸಿದ್ದೇನೆ ಎಂದಿದ್ದಾರೆ.
ಕರ್ನಾಟಕ ಸರ್ಕಾರ ಅಥವಾ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಮಂಜೂರಾತಿಗೆ ಸಂಬಂಧಿಸಿದಂತೆ ಯಾವುದೇ ಕಾನೂನು ಕ್ರಮಗಳನ್ನು ಇನ್ನೂ ಕೈಗೊಂಡಿಲ್ಲ. ಅಂತೆಯೇ ಪ್ರಕರಣದ ಮತ್ತೊಬ್ಬ ದೂರುದಾರ ಟಿಜೆ ಅಬ್ರಹಾಂ ಅವರು ಕೂಡ ಸೋಮವಾರ ಕೇವಿಯಟ್ ಸಲ್ಲಿಸುವುದಾಗಿ ಹೇಳಿದ್ದಾರೆ. ಯಾವುದೇ ಪ್ರಕರಣದಲ್ಲಿ ಅರ್ಜಿಗೆ ಮೊದಲೇ ನಿಗದಿತ ವಿಚಾರದಲ್ಲಿ ಕೇವಿಯಟ್ ಸಲ್ಲಿಸಿದ್ದರೆ, ಕೋರ್ಟ್ ತುರ್ತು ತೀರ್ಪು ನೀಡುವುದಕ್ಕೆ ಕಷ್ಟವಾಗುತ್ತದೆ.
One of the complainants in the MUDA 'scam' case on Saturday filed a caveat in the Karnataka High Court after Governor Thaawarchand Gehlot granted permission to prosecute Chief Minister Siddaramaiah.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm