ಬ್ರೇಕಿಂಗ್ ನ್ಯೂಸ್
21-08-24 11:39 am HK News Desk ಕರ್ನಾಟಕ
ಮಂಡ್ಯ, ಆ 21: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.
ನೆನ್ನೆ ರಾತ್ರಿ ಗಂಡ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.
ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.
Mandya 21 year old house wife suspicious death, husband jumps to lake after family troubles. The deceased have been identified as Swathi and Mohan. Their one year old girl baby is now said to be orphan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm