ಬ್ರೇಕಿಂಗ್ ನ್ಯೂಸ್
22-08-24 09:08 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್. 22: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಇಡಿ ಅಧಿಕಾರಿಗಳು ಹಣ ವರ್ಗಾವಣೆಗೆ ಕಾರಣ ಎನ್ನಲಾದ ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಿ ಜೈಲಿನಲ್ಲಿಟ್ಟಿದ್ದರೂ, ನಿಗಮದ ಅಧಿಕಾರಿ ಆತ್ಮಹತ್ಯೆ ಬಗ್ಗೆ ತನಿಖೆ ನಡೆಸಿದ ರಾಜ್ಯದ ಸಿಐಡಿ ತನಿಖಾ ತಂಡ ನಾಗೇಂದ್ರ ಪಾತ್ರ ಇಲ್ಲವೆಂದು ಕ್ಲೀನ್ ಚಿಟ್ ನೀಡಿದೆ.
ವಾಲ್ಮಿಕಿ ನಿಗಮದ ಲೆಕ್ಕಪರಿಶೋಧಕ ಚಂದ್ರಶೇಖರ್ ಆತ್ಮಹತ್ಯೆಗೆ ಸಂಬಂಧಿಸಿ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿರುವ ಸಿಐಡಿ ಅಧಿಕಾರಿಗಳು ಪ್ರಕರಣದಲ್ಲಿ ನಾಗೇಂದ್ರ ಹೆಸರನ್ನು ಕೈ ಬಿಟ್ಟಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆಗೆ ನಿಗಮದ ಎಂಡಿ ಪದ್ಮನಾಭ್ ಮತ್ತು ಪರುಶರಾಮ್ ಕಾರಣ ಎಂದು ಮಾತ್ರ ಉಲ್ಲೇಖಿಸಿದ್ದಾರೆ. ಇವರು ಆತ್ಮಹತ್ಯೆಗೆ ಪ್ರಚೋದನೆ ನೀಡಿ ಒತ್ತಡ ನೀಡಿದ್ದಾರೆ ಎಂದು ಇಬ್ಬರ ಹೆಸರು ಉಲ್ಲೇಖಿಸಿದ್ದಾರೆ. ನಿಗಮದ ಹಗರಣದಲ್ಲಿ ಒಂದಷ್ಟು ಹಣವನ್ನು ಚಂದ್ರಶೇಖರ್ ಪಡೆದಿರುವುದಾಗಿಯೂ ಉಲ್ಲೇಖಿಸಲಾಗಿದೆ.
ಪ್ರಕರಣ ಬೆಳಕಿಗೆ ಬಂದರೆ ತಾನೇ ಸಿಕ್ಕಿಬೀಳುವ ಭಯದಲ್ಲಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಇದಲ್ಲದೆ, ಪದ್ಮನಾಭ್ ಅವರು ಗೋವಾ ಮತ್ತು ಹೈದ್ರಾಬಾದ್ ಗೆ ಕರೆದುಕೊಂಡು ಹೋಗಿ ಒತ್ತಡ ಹಾಕಿದ್ದರು ಎಂದೂ ಉಲ್ಲೇಖಿಸಿದ್ದಾರೆ. ನೀನು ಹಣ ಪಡೆದಿದ್ದೀಯಾ, ಪ್ರಕರಣ ಬೆಳಕಿಗೆ ಬಂದ್ರೆ ನೀನೊಬ್ಬನೇ ಜೈಲಿಗೆ ಹೋಗ್ತಿಯಾ ಎಂದು ಬೆದರಿಕೆ ಹಾಕಿದ್ದರು. ನಿನ್ನ ವಿರುದ್ಧ ನಾನೇ ದೂರು ಕೊಡ್ತೀನಿ ಎಂದು ಚಂದ್ರಶೇಖರ್ಗೆ ಭಯ ಮೂಡಿಸಿದ್ದರು. ಹೀಗಾಗಿ ಪದ್ಮನಾಭ್ ಮತ್ತು ಪರುಶರಾಮ್ ಅವರೇ ಆತ್ಮಹತ್ಯೆಗೆ ಕಾರಣ ಎಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ 197 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಬಗ್ಗೆಯೂ ವಿಶೇಷ ತನಿಖಾ ತಂಡ ತನಿಖೆಯಲ್ಲಿ ತೊಡಗಿದೆ. ಸದ್ಯಕ್ಕೆ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಮಾತ್ರ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎನ್ನಲಾಗುತ್ತಿದೆ.
SIT givea clean chit to ex minister Nagendra in Valmiki multi crore scam.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 03:24 pm
Mangalore Correspondent
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm