ಬ್ರೇಕಿಂಗ್ ನ್ಯೂಸ್
26-08-24 04:52 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 26: ದರ್ಶನ್ ಕೈಯಲ್ಲಿ ಸಿಗರೇಟು ಹಿಡಿದು ಕುಳಿತಿರುವ ಫೋಟೋ ನೋಡಿ ನಮಗೆ ಶಾಕ್ ಆಯ್ತು, ಕುರ್ಚಿ ಮೇಲೆ ಕುಳಿತು ಚಹ, ಸಿಗರೇಟ್ ಹಿಡಿದು ಕೂತಿದ್ದಾರೆ. ರೆಸಾರ್ಟ್ ನಲ್ಲಿ ಕುಳಿತಂತೆ ಕುಳಿತಿದ್ದಾರೆ. ಇಂಥ ದೃಶ್ಯ ನಮ್ಮ ಹೊಟ್ಟೆ ಉರಿಸುತ್ತದೆ ಎಂದು ಕೊಲೆ ಆರೋಪಿ ದರ್ಶನ್ ರಾಜಾತಿಥ್ಯದ ಫೋಟೊ ನೋಡಿ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಕಣ್ಣೀರು ಹಾಕಿದ್ದಾರೆ.
ನ್ಯಾಯಾಂಗ ಆತನಿಗೆ ಮನೆ ಊಟ ಕೊಟ್ಟಿಲ್ಲ. ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಆದರೆ ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು ಜೈಲು ಆಗಿರ್ಬೇಕು, ಮತ್ತೊಂದು ಆಗಿರಬಾರ್ದು. ಸಿಎಂ ಸಿದ್ದರಾಮಯ್ಯ ಅವರು ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ. ನನ್ನ ಮಗನಿಗೆ ಶಾಂತಿ ಸಿಗಬೇಕು, ಅವರಿಗೆ ಶಿಕ್ಷೆಯಾಗಬೇಕು.

ಸರ್ಕಾರ ನಿರ್ದಾಕ್ಷಿಣ್ಯವಾಗಿ ತನಿಖೆ ಮಾಡಬೇಕು. ಕೈಮುಗಿದು ಸರ್ಕಾರವನ್ನ ನಾನು ಕೇಳುತ್ತೇನೆ. ಸರ್ಕಾರ, ಪೊಲೀಸರು, ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನನ್ನ ಮಗನ ಸಾವಿಗೆ ಇಡೀ ರಾಜ್ಯ ದುಃಖ ಪಟ್ಟಿದೆ. ಗೃಹ ಸಚಿವರು ಕೂಡಾ ಈ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಅವರು ಕೇಳಿಕೊಂಡಿದ್ದಾರೆ.
ನಮ್ಮ ಮನೆಯವರೆಲ್ಲ ಕಣ್ಣೀರಲ್ಲಿ ಕೈತೊಳೆದಿದ್ದೇವೆ. ಇಂಥವರಿಗೆ ಮನುಷ್ಯತ್ವ ಇದಿಯಾ? ದಿನ ಬೆಳಕಾದ್ರೆ ಸೊಸೆ ಜೀವನ ನೆನೆದು ಸಂಕಟ ಆಗುತ್ತದೆ. ಅದರ ಮಧ್ಯೆ ಇಂಥ ದೃಷ್ಯ ನೋಡಿ ನಮ್ಮ ಹೊಟ್ಟೆ ಉರಿಸುತ್ತದೆ. ದಯವಿಟ್ಟು ಸರ್ಕಾರ ನಡೆಸೋರು ಅರ್ಥ ಮಾಡಿಕೊಂಡು ಸಮಗ್ರ ತನಿಖೆ ಮಾಡಬೇಕು. ಈ ರೀತಿ ಆಗುವುದರಿಂದ ಸರ್ಕಾರದ ಮೇಲೆ ನಂಬಿಕೆ ಹೋಗುತ್ತದೆ. ಹೀಗಾದರೆ ಸಿಬಿಐ ತನಿಖೆಯನ್ನೇ ನಡೆಸಬೇಕು ಎಂದು ಶಿವನಗೌಡರ್ ಒತ್ತಾಯಿಸಿದ್ದಾರೆ.
Royal treatment for actor Darshan in jail, victim Renukaswamy father cries. A photo of actor Darshan with rowdy sheeter Wilson Naga and team went viral on social media alleging that prison authorities have been giving in royal treatment inside the prison
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 05:25 pm
Mangalore Correspondent
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm