ಬ್ರೇಕಿಂಗ್ ನ್ಯೂಸ್
28-08-24 11:07 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 28: ಸೀಬರ್ಡ್ ನೌಕಾನೆಲೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಿ ಏಜಂಟರಿಗೆ ರವಾನಿಸುತ್ತಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ಕಾರವಾರದಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ತೋಡೂರಿನ ಸುನೀಲ್ ನಾಯ್ಕ, ಮುದಗಾದ ವೇತನ್ ತಾಂಡೇಲ್, ಅಂಕೋಲಾ ಹಳವಳ್ಳಿಯ ಅಕ್ಷಯ ನಾಯ್ಕ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.
ಹಣಕ್ಕಾಗಿ ಕದಂಬ ನೌಕಾನೆಲೆಯ ಫೋಟೋ, ಇತರೆ ಮಾಹಿತಿಗಳನ್ನು ಪಾಕಿಸ್ತಾನದ ಐಎಸ್ಐ ಏಜಂಟರಿಗೆ ರವಾನಿಸುತ್ತಿದ್ದ ಆರೋಪ ಇವರ ಮೇಲಿದೆ. ಆರೋಪಿಗಳು ಈ ಹಿಂದೆ ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಎನ್ಐಎ ಡಿವೈಎಸ್ಪಿ ನೇತೃತ್ವದಲ್ಲಿ ಮೂವರು ಇನ್ಸಪೆಕ್ಟರ್, ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದ ಆರೋಪದಲ್ಲಿ 2023ರಲ್ಲಿ ಹೈದರಾಬಾದ್ನಲ್ಲಿ ದೀಪಕ್ ಎಂಬಾತನನ್ನು ಎನ್ಐಎ ಅರೆಸ್ಟ್ ಮಾಡಿದ್ದು ಆ ಸಂದರ್ಭದಲ್ಲಿ ವಿದೇಶಿ ನೆಟ್ವರ್ಕ್ ಪತ್ತೆಯಾಗಿತ್ತು. ದೇಶದ ಒಳಗಿನ ರಹಸ್ಯಗಳನ್ನು ಹಣಕ್ಕಾಗಿ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಯೂ ಸಿಕ್ಕಿತ್ತು. ದೀಪಕ್ ಹಾಗೂ ಇತರರ ತನಿಖೆ ವೇಳೆ ಕಾರವಾರದ ಮೂವರ ಹೆಸರು ತಿಳಿದುಬಂದಿತ್ತು. ಸೀಬರ್ಡ್ ನೌಕಾನೆಲೆಯ ಫೋಟೋ, ಮಾಹಿತಿ ರವಾನಿಸಿ ಕಾರ್ಮಿಕರು ಹಣ ಪಡೆದಿದ್ದರು. ಆಬಳಿಕ ಅಂಕೋಲಾದ ಅಕ್ಷಯ ನಾಯ್ಕ ನೌಕಾನೆಲೆ ತೊರೆದು ಗೋವಾದಲ್ಲಿ ಹೊಟೇಲ್ ಕೆಲಸಕ್ಕೆ ಸೇರಿದ್ದ. ಇದೀಗ ರಹಸ್ಯ ಕಾರ್ಯಾಚರಣೆಯಲ್ಲಿ ಮೂವರನ್ನು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದ್ದಾರೆ. ಮೊಬೈಲ್ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.
ಆರೋಪಿಗಳು ಹನಿಟ್ರಾಪ್ ಬಲೆಗೆ ಬಿದ್ದು ವಿದೇಶಿ ನೆಟ್ವರ್ಕ್ ಜೊತೆಗೆ ಶಾಮೀಲಾಗಿದ್ದರೆ, ಕೇವಲ ಹಣಕ್ಕಾಗಿ ಈ ಕೃತ್ಯ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
Seabird Shipyard Secret Leak, NIA operation in Karwar, three arrested for info to Pakistani agents.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm