ಬ್ರೇಕಿಂಗ್ ನ್ಯೂಸ್
28-08-24 11:07 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 28: ಸೀಬರ್ಡ್ ನೌಕಾನೆಲೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಿ ಏಜಂಟರಿಗೆ ರವಾನಿಸುತ್ತಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ಕಾರವಾರದಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ತೋಡೂರಿನ ಸುನೀಲ್ ನಾಯ್ಕ, ಮುದಗಾದ ವೇತನ್ ತಾಂಡೇಲ್, ಅಂಕೋಲಾ ಹಳವಳ್ಳಿಯ ಅಕ್ಷಯ ನಾಯ್ಕ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.
ಹಣಕ್ಕಾಗಿ ಕದಂಬ ನೌಕಾನೆಲೆಯ ಫೋಟೋ, ಇತರೆ ಮಾಹಿತಿಗಳನ್ನು ಪಾಕಿಸ್ತಾನದ ಐಎಸ್ಐ ಏಜಂಟರಿಗೆ ರವಾನಿಸುತ್ತಿದ್ದ ಆರೋಪ ಇವರ ಮೇಲಿದೆ. ಆರೋಪಿಗಳು ಈ ಹಿಂದೆ ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಎನ್ಐಎ ಡಿವೈಎಸ್ಪಿ ನೇತೃತ್ವದಲ್ಲಿ ಮೂವರು ಇನ್ಸಪೆಕ್ಟರ್, ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದ ಆರೋಪದಲ್ಲಿ 2023ರಲ್ಲಿ ಹೈದರಾಬಾದ್ನಲ್ಲಿ ದೀಪಕ್ ಎಂಬಾತನನ್ನು ಎನ್ಐಎ ಅರೆಸ್ಟ್ ಮಾಡಿದ್ದು ಆ ಸಂದರ್ಭದಲ್ಲಿ ವಿದೇಶಿ ನೆಟ್ವರ್ಕ್ ಪತ್ತೆಯಾಗಿತ್ತು. ದೇಶದ ಒಳಗಿನ ರಹಸ್ಯಗಳನ್ನು ಹಣಕ್ಕಾಗಿ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಯೂ ಸಿಕ್ಕಿತ್ತು. ದೀಪಕ್ ಹಾಗೂ ಇತರರ ತನಿಖೆ ವೇಳೆ ಕಾರವಾರದ ಮೂವರ ಹೆಸರು ತಿಳಿದುಬಂದಿತ್ತು. ಸೀಬರ್ಡ್ ನೌಕಾನೆಲೆಯ ಫೋಟೋ, ಮಾಹಿತಿ ರವಾನಿಸಿ ಕಾರ್ಮಿಕರು ಹಣ ಪಡೆದಿದ್ದರು. ಆಬಳಿಕ ಅಂಕೋಲಾದ ಅಕ್ಷಯ ನಾಯ್ಕ ನೌಕಾನೆಲೆ ತೊರೆದು ಗೋವಾದಲ್ಲಿ ಹೊಟೇಲ್ ಕೆಲಸಕ್ಕೆ ಸೇರಿದ್ದ. ಇದೀಗ ರಹಸ್ಯ ಕಾರ್ಯಾಚರಣೆಯಲ್ಲಿ ಮೂವರನ್ನು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದ್ದಾರೆ. ಮೊಬೈಲ್ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.
ಆರೋಪಿಗಳು ಹನಿಟ್ರಾಪ್ ಬಲೆಗೆ ಬಿದ್ದು ವಿದೇಶಿ ನೆಟ್ವರ್ಕ್ ಜೊತೆಗೆ ಶಾಮೀಲಾಗಿದ್ದರೆ, ಕೇವಲ ಹಣಕ್ಕಾಗಿ ಈ ಕೃತ್ಯ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
Seabird Shipyard Secret Leak, NIA operation in Karwar, three arrested for info to Pakistani agents.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm