ಬ್ರೇಕಿಂಗ್ ನ್ಯೂಸ್
30-08-24 11:24 am HK News Desk ಕರ್ನಾಟಕ
ಕಾರವಾರ, ಆ 30: ಕೈದಿಗಳಿಬ್ಬರು ರಂಪಾಟ ಮಾಡಿ, ತಲೆ ಒಡೆದುಕೊಂಡಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಜೈಲಿನೊಳಗೆ ಬಹಳಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ, ಸೂಕ್ತ ಸೌಲಭ್ಯವಿಲ್ಲ ಹಾಗೂ ಹೊರಗಿನಿಂದ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬಿಡುತ್ತಿಲ್ಲ. ತಮಗೆ ತಂಬಾಕು ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಅಧಿಕಾರಿಗಳ ಜೊತೆ ರಗಳೆ ತೆಗೆದಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲಿ ಗಲಾಟೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ, ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ನೀಡಿದ್ದರು. ಅಲ್ಲದೇ ಜೈಲಿನ ಒಳಗೆ ಹೋಗಿ ಕೈದಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು. ಗಲಾಟೆ ಮಾಡಿ ಗಾಯಗೊಂಡವರು ದಾಂಡೇಲಿಯ ಮುಜಾಮಿಲ್ ಹಾಗೂ ಕುಮಟಾದ ಫರಾನ್ ಛಬ್ಬಿ ಎನ್ನುವರಾಗಿದ್ದಾರೆ. ಕಲ್ಲಿನಿಂದ ಹೊಡೆದುಕೊಂಡು ಗಾಯ ಮಾಡಿಕೊಂಡಿದ್ದ ಇಬ್ಬರ ತಲೆಗೆ ಬಟ್ಟೆ ಸುತ್ತಿ, ಕಾರವಾರದ ಕ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕೈದಿಗಳನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ, ತಮಗೆ ಜೈಲು ಅಧಿಕಾರಿಗಳು ಮನಬಂದಂತೆ ಥಳಿಸಿದ್ದಾರೆ. ಈ ಗಲಾಟೆಗೆ ಜೈಲು ಅಧಿಕಾರಿಗಳೇ ಕಾರಣ ಎಂದು ಆರೋಪ ಮಾಡುತ್ತ ತೆರಳಿದರು. ಆದರೆ, ಈ ಬಗ್ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ಕೈದಿಗಳ ಆರೋಪವು ಸುಳ್ಳು ಎಂದು ತಳ್ಳಿಹಾಕಿದ್ದಾರೆ.
''ಕೈದಿಗಳು ಗಲಾಟೆ ಮಾಡಿಕೊಳ್ಳುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜೈಲಿಗೆ ತೆರಳಿ ಪರಿಶೀಲಿಸಲಾಗಿದೆ. ಜೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದರಿಂದ ಮತ್ತು ಸರಿಯಾಗಿ ಊಟ ನೀಡುವಂತೆ ಗಲಾಟೆ ನಡೆಸಿದ್ದರು. ಆರಂಭದಲ್ಲಿ ಗಲಾಟೆ ಬಗ್ಗೆ ಕೇಳಿದಾಗ ಜೈಲಾಧಿಕಾರಿಗಳು ಹಲ್ಲೆ ಮಾಡಿರುವುದಾಗಿ ನಮಗೂ ದೂರಿದ್ದರು. ಬಳಿಕ ಜೈಲಿನಲ್ಲಿ ಪರಿಶೀಲನೆ ನಡೆಸಿ, ಕೈದಿಗಳು ಹಾಗೂ ಜೈಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಇಬ್ಬರೂ ಕಲ್ಲಿನಿಂದ ಮೂರ್ನಾಲ್ಕು ಬಾರಿ ಹೊಡೆದುಕೊಂಡಿರುವುದು ಖಚಿತವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ'' ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ತಿಳಿಸಿದ್ದಾರೆ.
Karwar jail inmates break head and fight, two hospitalized
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm