ಬ್ರೇಕಿಂಗ್ ನ್ಯೂಸ್
30-08-24 11:24 am HK News Desk ಕರ್ನಾಟಕ
ಕಾರವಾರ, ಆ 30: ಕೈದಿಗಳಿಬ್ಬರು ರಂಪಾಟ ಮಾಡಿ, ತಲೆ ಒಡೆದುಕೊಂಡಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಜೈಲಿನೊಳಗೆ ಬಹಳಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ, ಸೂಕ್ತ ಸೌಲಭ್ಯವಿಲ್ಲ ಹಾಗೂ ಹೊರಗಿನಿಂದ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬಿಡುತ್ತಿಲ್ಲ. ತಮಗೆ ತಂಬಾಕು ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಅಧಿಕಾರಿಗಳ ಜೊತೆ ರಗಳೆ ತೆಗೆದಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲಿ ಗಲಾಟೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ, ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ನೀಡಿದ್ದರು. ಅಲ್ಲದೇ ಜೈಲಿನ ಒಳಗೆ ಹೋಗಿ ಕೈದಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು. ಗಲಾಟೆ ಮಾಡಿ ಗಾಯಗೊಂಡವರು ದಾಂಡೇಲಿಯ ಮುಜಾಮಿಲ್ ಹಾಗೂ ಕುಮಟಾದ ಫರಾನ್ ಛಬ್ಬಿ ಎನ್ನುವರಾಗಿದ್ದಾರೆ. ಕಲ್ಲಿನಿಂದ ಹೊಡೆದುಕೊಂಡು ಗಾಯ ಮಾಡಿಕೊಂಡಿದ್ದ ಇಬ್ಬರ ತಲೆಗೆ ಬಟ್ಟೆ ಸುತ್ತಿ, ಕಾರವಾರದ ಕ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕೈದಿಗಳನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ, ತಮಗೆ ಜೈಲು ಅಧಿಕಾರಿಗಳು ಮನಬಂದಂತೆ ಥಳಿಸಿದ್ದಾರೆ. ಈ ಗಲಾಟೆಗೆ ಜೈಲು ಅಧಿಕಾರಿಗಳೇ ಕಾರಣ ಎಂದು ಆರೋಪ ಮಾಡುತ್ತ ತೆರಳಿದರು. ಆದರೆ, ಈ ಬಗ್ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ಕೈದಿಗಳ ಆರೋಪವು ಸುಳ್ಳು ಎಂದು ತಳ್ಳಿಹಾಕಿದ್ದಾರೆ.
''ಕೈದಿಗಳು ಗಲಾಟೆ ಮಾಡಿಕೊಳ್ಳುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜೈಲಿಗೆ ತೆರಳಿ ಪರಿಶೀಲಿಸಲಾಗಿದೆ. ಜೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದರಿಂದ ಮತ್ತು ಸರಿಯಾಗಿ ಊಟ ನೀಡುವಂತೆ ಗಲಾಟೆ ನಡೆಸಿದ್ದರು. ಆರಂಭದಲ್ಲಿ ಗಲಾಟೆ ಬಗ್ಗೆ ಕೇಳಿದಾಗ ಜೈಲಾಧಿಕಾರಿಗಳು ಹಲ್ಲೆ ಮಾಡಿರುವುದಾಗಿ ನಮಗೂ ದೂರಿದ್ದರು. ಬಳಿಕ ಜೈಲಿನಲ್ಲಿ ಪರಿಶೀಲನೆ ನಡೆಸಿ, ಕೈದಿಗಳು ಹಾಗೂ ಜೈಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಇಬ್ಬರೂ ಕಲ್ಲಿನಿಂದ ಮೂರ್ನಾಲ್ಕು ಬಾರಿ ಹೊಡೆದುಕೊಂಡಿರುವುದು ಖಚಿತವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ'' ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ತಿಳಿಸಿದ್ದಾರೆ.
Karwar jail inmates break head and fight, two hospitalized
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm