ಬ್ರೇಕಿಂಗ್ ನ್ಯೂಸ್
30-08-24 10:03 pm HK News Desk ಕರ್ನಾಟಕ
ಬೆಳಗಾವಿ, ಆ 30: ಒಮಾನ್ ದೇಶದಲ್ಲಿ ಈಚೆಗೆ ಸಂಭವಿಸಿದ ಕಾರು ಅಪಘಾತದಲ್ಲಿ ಗೋಕಾಕ ಮೂಲದ ನಾಲ್ವರು ಸಜೀವ ದಹನವಾಗಿದ್ದಾರೆ.
ಗೋಕಾಕ್ನ ವಿಜಯಾ ಮಾಯಪ್ಪ ತಹಶೀಲ್ದಾರ (58), ಪುತ್ರ ಪವನ್ ಕುಮಾರ್ (33), ಪುತ್ರಿ ಪೂಜಾ (30) ಮತ್ತು ಅಳಿಯ ರಾಯಚೂರಿನ ದೇವದುರ್ಗದ ಆದಿಶೇಷ ಬಸವರಾಜ (36) ಮೃತ ದುರ್ದೈವಿಗಳು.
ಒಮಾನಿನ ಸಲಾಲಾ ನಗರದಿಂದ ಮುಸ್ಕತ್ಗೆ ತೆರಳುತ್ತಿದ್ದ ವೇಳೆ ಹೈಮಾ ಪ್ರದೇಶದ ಹತ್ತಿರ ಕಾರ್ ಅಪಘಾತಕ್ಕೀಡಾಯಿತು. ಮೊದಲು ಇವರೆಲ್ಲ ಕೇರಳದವರು ಎಂಬ ತಪ್ಪು ಮಾಹಿತಿ ರವಾನೆಯಾಗಿತ್ತು. ನಾಲ್ವರೂ ಗೋಕಾಕ ಮೂಲದವರು ಎಂದು ಭಾರತೀಯ ರಾಯಭಾರ ಕಚೇರಿ ಮೂಲಗಳು ಖಚಿತಪಡಿಸಿವೆ ಎಂದು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಶವಗಳನ್ನು ಹೈಮಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತದೇಹಗಳನ್ನು ಭಾರತಕ್ಕೆ ತರಲು ಈಗಾಗಲೇ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಭಾರತೀಯ ರಾಯಭಾರ ಕಚೇರಿಯಿಂದ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡಲು ಮನವಿ ಮಾಡಲಾಗಿದೆ' ಎಂದರು.
ನಾಲ್ವರು ಕಾರಿನಲ್ಲಿ ಸಲಾಲಾ ನಗರದಿಂದ ಮಸ್ಕತ್ಗೆ ತೆರಳುತ್ತಿದ್ದರು. ಮಧ್ಯದಲ್ಲಿ ಪೆಟ್ರೋಲ್ ಖಾಲಿಯಾಗಿದ್ದರಿಂದ ರಸ್ತೆ ಬದಿ ಕಾರ್ ನಿಲ್ಲಿಸಿದ್ದರು. ಆಗ ಸ್ಥಳಕ್ಕೆ ಬಂದ ಪೊಲೀಸರು ಇವರ ಸಂಪೂರ್ಣ ಮಾಹಿತಿ ಕಲೆಹಾಕಿದರು. ಪೊಲೀಸರು ಪೆಟ್ರೋಲ್ ತರಿಸಿಕೊಟ್ಟ ಬಳಿಕ ಮತ್ತೆ ಕಾರು ಹತ್ತಿಕೊಂಡು ನಾಲ್ವರೂ ಹೊರಟಿದ್ದರು. ಈ ವೇಳೆ 15 ಕಿ.ಮೀ ಮುಂದೆ ಹೋಗುತ್ತಿದ್ದಂತೆ ಕಾರಿನ ಮುಂದೆ ಹೋಗುತ್ತಿದ್ದ ತೈಲ ಸಾಗಣೆಯ ಟ್ಯಾಂಕರ್ ಗೆ ಬೆಂಕಿ ತಾಗಿ ಅದು ಸ್ಫೋಟಗೊಂಡಿದೆ. ಬಳಿಕ ಇವರ ಕಾರಿನ ಮೇಲೆಯೂ ತೈಲ ಚೆಲ್ಲಿದ್ದರಿಂದ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾಯಿತು. ಮೃತರ ವಿವರವನ್ನು ಸ್ಥಳೀಯ ಪೊಲೀಸರು ಕಲೆ ಹಾಕಿದ್ದಾರೆ.
Four members of a family with origins in Gokak were killed in a road accident in the Sultanate of Oman recently. The deceased have been identified as Pavankumar Mayappa Tahsildar, Vijaya Mayappa Tahsildar, Pooja Mayappa Tahsildar and Adishesh Basavaraj. The accident occurred when they were travelling from Salalah in Oman to Muscat.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm