ಬ್ರೇಕಿಂಗ್ ನ್ಯೂಸ್
02-09-24 02:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.
ಖರ್ಗೆ ಒಡೆತನದ ಸಿದ್ಧವಿಹಾರ ಟ್ರಸ್ಟ್ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಸಿಎ ನಿವೇಶನ ನೀಡಿದ ಪ್ರಕರಣದ ವಿವರ ಕೊಡಿ ಎಂದು ಆದೇಶಿಸಿದ್ದಾರೆ. ಈ ಮೂಲಕ ರಾಜ್ಯಪಾಲರು ಮತ್ತೊಂದು ದಾಳ ಉರುಳಿಸಿದ್ದಾರೆ.
ಇತ್ತೀಚೆಗಷ್ಟೇ ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು. ನಾರಾಯಣಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಸರ್ಕಾರದಿಂದ ಹೆಚ್ಚಿನ ವಿವರಣೆ ನೀಡುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಬೆಂಗಳೂರಿನ ಏರೋಸ್ಪೇಸ್ ಪಾರ್ಕ್ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿಯಿಂದ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧವಿಹಾರ ಟ್ರಸ್ಟ್ಗೆ ಮಂಜೂರು ಮಾಡಲಾಗಿದೆ. ಮಾರ್ಚ್ 4 ರಂದು ಅರ್ಜಿಗಳ ಪರಿಶೀಲನೆ ನಡೆದಿದ್ದು, ಮಾರ್ಚ್ 5 ರಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಿರ್ಣಯ ಕೈಗೊಂಡು ಮಾರ್ಚ್ 6 ರಿಂದ ಹಂಚಿಕೆ ಪತ್ರಗಳನ್ನು ನೀಡಲಾಗಿದೆ. ಇಷ್ಟೊಂದು ಅವಸರದಲ್ಲಿ ಹಂಚಿಕೆ ಮಾಡಿದ್ದು ಯಾಕೆ ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದರು.
ಟ್ರಸ್ಟ್ಗೆ ನೀಡಲಾಗಿರುವ ನಿವೇಶನ ಹಂಚಿಕೆಯಲ್ಲಿ ಹಲವಾರು ಲೋಪಗಳಾಗಿವೆ. ಅಕ್ರಮದಿಂದಾಗಿ ಸರ್ಕಾರಕ್ಕೆ ಸುಮಾರು ರೂ. 1,000 ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದರು. ಅರ್ಜಿ ಸಲ್ಲಿಸಲು ಕೇವಲ 14 ದಿನಗಳ ಕಾಲಾವಕಾಶ ನೀಡಿ ತರಾತುರಿಯಲ್ಲಿ ಪ್ರಕ್ರಿಯೆ ಮುಗಿಸಿರುವುದರಿಂದ ಸಿಎ ನಿವೇಶನಗಳ ಹಂಚಿಕೆಗೆ ಅಧಿಸೂಚನೆ ಹೊರಡಿಸಿರುವ ಬಗ್ಗೆಯೂ ಸಾರ್ವಜನಿಕರಿಗೆ ತಿಳಿಯದಂತಾಗಿದೆ. ಇದು ಕೆಐಎಡಿಬಿ ಇತಿಹಾಸದಲ್ಲಿ ನಡೆದಿರುವ ಅತಿದೊಡ್ಡ ಲೋಪ ಎಂದು ಆರೋಪಿಸಿದ್ದಾರೆ.
Karnataka Governor Thaawarchand Gehlot has asked Chief Secretary Shalini Rajneesh to submit a detailed report on the complaint filed against the family of Mallikarjun Kharge.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm