ಬ್ರೇಕಿಂಗ್ ನ್ಯೂಸ್
02-09-24 02:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.
ಖರ್ಗೆ ಒಡೆತನದ ಸಿದ್ಧವಿಹಾರ ಟ್ರಸ್ಟ್ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಸಿಎ ನಿವೇಶನ ನೀಡಿದ ಪ್ರಕರಣದ ವಿವರ ಕೊಡಿ ಎಂದು ಆದೇಶಿಸಿದ್ದಾರೆ. ಈ ಮೂಲಕ ರಾಜ್ಯಪಾಲರು ಮತ್ತೊಂದು ದಾಳ ಉರುಳಿಸಿದ್ದಾರೆ.
ಇತ್ತೀಚೆಗಷ್ಟೇ ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು. ನಾರಾಯಣಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಸರ್ಕಾರದಿಂದ ಹೆಚ್ಚಿನ ವಿವರಣೆ ನೀಡುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಬೆಂಗಳೂರಿನ ಏರೋಸ್ಪೇಸ್ ಪಾರ್ಕ್ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿಯಿಂದ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧವಿಹಾರ ಟ್ರಸ್ಟ್ಗೆ ಮಂಜೂರು ಮಾಡಲಾಗಿದೆ. ಮಾರ್ಚ್ 4 ರಂದು ಅರ್ಜಿಗಳ ಪರಿಶೀಲನೆ ನಡೆದಿದ್ದು, ಮಾರ್ಚ್ 5 ರಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಿರ್ಣಯ ಕೈಗೊಂಡು ಮಾರ್ಚ್ 6 ರಿಂದ ಹಂಚಿಕೆ ಪತ್ರಗಳನ್ನು ನೀಡಲಾಗಿದೆ. ಇಷ್ಟೊಂದು ಅವಸರದಲ್ಲಿ ಹಂಚಿಕೆ ಮಾಡಿದ್ದು ಯಾಕೆ ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದರು.
ಟ್ರಸ್ಟ್ಗೆ ನೀಡಲಾಗಿರುವ ನಿವೇಶನ ಹಂಚಿಕೆಯಲ್ಲಿ ಹಲವಾರು ಲೋಪಗಳಾಗಿವೆ. ಅಕ್ರಮದಿಂದಾಗಿ ಸರ್ಕಾರಕ್ಕೆ ಸುಮಾರು ರೂ. 1,000 ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದರು. ಅರ್ಜಿ ಸಲ್ಲಿಸಲು ಕೇವಲ 14 ದಿನಗಳ ಕಾಲಾವಕಾಶ ನೀಡಿ ತರಾತುರಿಯಲ್ಲಿ ಪ್ರಕ್ರಿಯೆ ಮುಗಿಸಿರುವುದರಿಂದ ಸಿಎ ನಿವೇಶನಗಳ ಹಂಚಿಕೆಗೆ ಅಧಿಸೂಚನೆ ಹೊರಡಿಸಿರುವ ಬಗ್ಗೆಯೂ ಸಾರ್ವಜನಿಕರಿಗೆ ತಿಳಿಯದಂತಾಗಿದೆ. ಇದು ಕೆಐಎಡಿಬಿ ಇತಿಹಾಸದಲ್ಲಿ ನಡೆದಿರುವ ಅತಿದೊಡ್ಡ ಲೋಪ ಎಂದು ಆರೋಪಿಸಿದ್ದಾರೆ.
Karnataka Governor Thaawarchand Gehlot has asked Chief Secretary Shalini Rajneesh to submit a detailed report on the complaint filed against the family of Mallikarjun Kharge.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm