ಬ್ರೇಕಿಂಗ್ ನ್ಯೂಸ್
02-09-24 08:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಹೈಕೋರ್ಟಿನಲ್ಲಿ ಮುಂದುವರಿದಿದ್ದು ಮತ್ತೆ ಸೆ.9ಕ್ಕೆ ಮುಂದೂಡಿಕೆಯಾಗಿದೆ.
ಸೆಪ್ಟೆಂಬರ್ 2ರ ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎರಡೂ ಕಡೆಯ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ ಜಿ ರಾಘವನ್ ವಾದ ಮಂಡಿಸಿದ್ದಾರೆ. “ಮುಖ್ಯಮಂತ್ರಿ ವಿರುದ್ಧ ಸಣ್ಣ ಪ್ರಮಾಣದ ಅನುಮಾನಗಳಿದ್ದರೂ ತನಿಖೆಗೆ ಅನುಮತಿಸಬೇಕು. ಅದನ್ನು ಕಡೆಗಣಿಸಬಾರದು” ಎಂದು ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ.

“1998-99ರ ನಡುವೆ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದರು. 2004-05ರ ಅವಧಿಯಲ್ಲಿ ಮತ್ತೆ ಡಿಸಿಎಂ ಆಗಿದ್ದರು. 2013-18ರ ಅವಧಿಯಲ್ಲಿ ಸಿಎಂ ಆಗಿದ್ದರು. ಈಗ ಮತ್ತೆ 2023ರಿಂದ ಸಿಎಂ ಆಗಿದ್ದಾರೆ. ಇಷ್ಟು ಸಮಯದವರೆಗೂ ಮೈಸೂರಿನ ತನ್ನ ಹೆಸರಲ್ಲಿ ಸೈಟ್ ಪಡೆದಿರುವುದು ಸಿದ್ದರಾಮಯ್ಯ ಗಮನಕ್ಕೆ ಬಂದಿಲ್ಲವೇ” ಎಂದು ಕೆ.ಜಿ ರಾಘವನ್ ಪ್ರಶ್ನಿಸಿದ್ದಾರೆ.
ವಿಚಾರಣೆಯನ್ನು ಸೆಪ್ಟೆಂಬರ್ 9ರ ಮಧ್ಯಾಹ್ನ 2:30 ಗಂಟೆಗೆ ಮುಂದೂಡಿದ ಪೀಠವು, ಸೆಪ್ಟೆಂಬರ್ 12ರ ಒಳಗಾಗಿ ಪ್ರಕರಣದ ವಾದ ಮುಗಿಯಬೇಕು. ಇನ್ನಷ್ಟು ವಿಳಂಬ ಸರಿಯಲ್ಲ ಎಂದು ತಿಳಿಸಿದೆ.
The Karnataka High Court on Monday extended till September nine the interim stay on trial court proceedings against Chief Minister Siddaramaiah in connection with the alleged Mysuru Urban Development Authority (MUDA) case.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm