ಬ್ರೇಕಿಂಗ್ ನ್ಯೂಸ್
03-09-24 11:10 am HK News Desk ಕರ್ನಾಟಕ
ಶಿವಮೊಗ್ಗ, ಸೆ 03: ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಕಳೆದ ಶನಿವಾರ ತೀರ್ಥಹಳ್ಳಿ ತಾಲೂಕು ಇಂದಾವರ ಗ್ರಾಮದ ಜಯದೀಪ್(24) ಎಂಬಾತ ತನ್ನ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ. ಈತನ ಬೈಕ್ ತೀರ್ಥಹಳ್ಳಿಯ ತುಂಗಾ ನದಿಯ ಪಕ್ಕದಲ್ಲಿ ಪತ್ತೆಯಾಗಿತ್ತು. ಪೋಷಕರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮಗ ನಾಪತ್ತೆಯಾದ ಕುರಿತು ದೂರು ದಾಖಲಿಸಿದ್ದರು.
ಇದರಿಂದ ಕಳೆದ ಎರಡು ದಿನಗಳಿಂದ ತೀರ್ಥಹಳ್ಳಿ ಪೊಲೀಸರು ಹಾಗೂ ಅಗ್ನಿ ಶಾಮಕದಳವರು ಜಯದೀಪ್ ಶವಕ್ಕಾಗಿ ತುಂಗಾ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಸೋಮವಾರ ಸಂಜೆ ತೀರ್ಥಹಳ್ಳಿಯ ಸ್ಮಶಾನಕಟ್ಟೆ ಸಮೀಪ ನದಿಯಲ್ಲಿ ಮೃತದೇಹ ಸಿಕ್ಕಿದೆ.

ಜಯದೀಪ್ ನಾಪತ್ತೆಯಾಗುವ ಮುನ್ನ ತನ್ನ ಮೊಬೈಲ್ನಲ್ಲಿ ಮೂರು ಪುಟದ ಡೆತ್ನೋಟನ್ನು ವಾಟ್ಸ್ಆ್ಯಪ್ ಸ್ಟೇಟಸ್ಗೆ ಅಪ್ಲೋಡ್ ಮಾಡಿ ನಾಪತ್ತೆಯಾಗಿದ್ದ. ಇದರಲ್ಲಿ ಪ್ರೀತಿಸಲು ಹುಡುಗಿ ಸಿಕ್ಕಿಲ್ಲ ಎಂಬುದರ ಜೊತೆಗೆ ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಕಳೆದುಕೊಂಡಿದ್ದೇನೆ ಎಂದು ಬರೆದಿದ್ದಾನೆ. ನಾನು ಬದುಕಲು ಬೇರೆ ದಾರಿ ಹುಡುಕಬಹುದಾಗಿತ್ತು. ಆದರೆ, ಸಾವಿನ ದಾರಿ ಕರೆಯುತ್ತಿದೆ. ತಂದೆ-ತಾಯಿ ನನ್ನನ್ನು ಕ್ಷಮಿಸಿ. ನಾನು ಸಾಲ ಮಾಡಿದ್ದನ್ನು ನಿಮ್ಮ ಮೇಲೆ ಬಿಟ್ಟು ಹೋಗುತ್ತಿದ್ದೇನೆ ಎಂದು ಬೇಸರ ಮಾಡಿಕೊಳ್ಳಬೇಡಿ. ನನ್ನ ಬೈಕ್ ಮಾರಿ ಅದರಲ್ಲಿ ಎಲ್ಲರಿಗೂ ಸ್ವಲ್ಪ ಸ್ವಲ್ಪ ಹಣ ಕೊಟ್ಟು ಸಾಲ ತೀರಿಸಿ ಎಂದು ಬರೆದಿದ್ದಾನೆ.
ಮೃತ ಯುವಕ ಜಯದೀಪ್ ಓದಿನಲ್ಲಿ ಮುಂದಿದ್ದ. ಆದರೆ ತನಗೆ ಪ್ರೀತಿ ಮಾಡಲು ಯುವತಿ ಸಿಗುತ್ತಿಲ್ಲ ಅಂತಾ ನೊಂದಿದ್ದ. ಜೊತೆಗೆ ಆನ್ಲೈನ್ನಲ್ಲಿ ಹಣ ತೊಡಗಿಸಲು ಸಾಲ ಮಾಡಿಕೊಂಡಿದ್ದ. ಈಗಾಗಿ ಮನನೊಂದ ಯುವಕ ವಾಟ್ಸಪ್ ಸ್ಟೇಟಸ್ನಲ್ಲಿ ಡೆತ್ ಹಂಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತುಂಗಾನದಿಯಿಂದ ಮೃತದೇಹ ಹೊರ ತೆಗೆದು, ಮರಣೋತ್ತರ ಶವ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಘಟನೆ ಕುರಿತು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shivamogga 24 year old youth commits suicide by jumping into river, posts death note on whatsapp. The deceased has been identified as Jayadeep.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm